ಬ್ರೇಕಿಂಗ್ ನ್ಯೂಸ್
29-05-23 12:01 pm HK News Desk ದೇಶ - ವಿದೇಶ
ಗುವಾಹಟಿ, ಮೇ 29: ಅಸ್ಸಾಂ ರಾಜ್ಯದ ಗುವಾಹಟಿ ಜಲುಕ್ಬರಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 7 ವಿದ್ಯಾರ್ಥಿಗಳು ಸಾವನ್ನಪ್ಪಿ, ಹಲವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಅಜಾರಾ ಪ್ರದೇಶದಿಂದ ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್ ದಾಟಿ ಎದುರಿನ ಲೇನ್ನಲ್ಲಿ ಸಾಗುತ್ತಿದ್ದ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಸರಕು ಸಾಗಣೆ ಟ್ರಕ್ ನಲ್ಲಿದ್ದ 6 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಮೃತರು 7 ಮಂದಿ ಅಸ್ಸಾಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಸಿದ್ದಾರೆ.


ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ್ ಅವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಜಲುಕ್ಬರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವ ಮತ್ತು ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ಅತೀವ್ರ ನೋವು ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಘಟನೆ ಸಂಬಂಧ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ನೆರವು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
Seven students of Assam Engineering College were killed and six others injured in a road accident in Guwahati on Monday, police said. Ten third-year students left the college premises in a car early this morning, and their speeding vehicle hit a road divider and then collided with a pick-up van in Jalukbari area of the city, an officer said.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm