ಬ್ರೇಕಿಂಗ್ ನ್ಯೂಸ್
01-06-23 12:50 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 1: ರಾಜಸ್ಥಾನದಲ್ಲಿ ಚುನಾವಣೆಗೆ ಒಂದು ವರ್ಷ ಇರುವಾಗಲೇ ಪ್ರತಿ ಮನೆಗೂ 100 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಣೆ ಮಾಡಿದ್ದಾರೆ.
‘ತಿಂಗಳಿಗೆ 100 ಯುನಿಟ್ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಬಿಲ್ ಇರುವುದಿಲ್ಲ. ಅದಕ್ಕಿಂತಲೂ ಹೆಚ್ಚು ಬಳಕೆ ಮಾಡುವ ಕುಟುಂಬಗಳಿಗೆ ಮೊದಲ 100 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಅಂದರೆ, ಎಷ್ಟೇ ಬಿಲ್ ಬಂದರೂ ಮೊದಲ 100 ಯುನಿಟ್ಗೆ ವಿದ್ಯುತ್ ಶುಲ್ಕ ಪಾವತಿಸಬೇಕಾಗಿಲ್ಲ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ತಿಂಗಳಿಗೆ 200 ಯೂನಿಟ್ ವರೆಗೆ ವಿದ್ಯುತ್ ಬಳಸುವ ಮಧ್ಯಮ ವರ್ಗದ ಜನರಿಗೆ, ಮೊದಲ 100 ಯೂನಿಟ್ ಉಚಿತವಾಗಲಿದೆ. ಜತೆಗೆ 200 ಯುನಿಟ್ಗಳ ವರೆಗೆ ಸ್ಥಿರ ಶುಲ್ಕ, ಇಂಧನ ಸರ್ಚಾರ್ಜ್ ಮತ್ತು ಇತರ ಎಲ್ಲಾ ಶುಲ್ಕಗಳನ್ನು ಮನ್ನಾ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಜಸ್ಥಾನದಾದ್ಯಂತ ಹಮ್ಮಿಕೊಳ್ಳಲಾಗಿರುವ ಹಣದುಬ್ಬರ ಪರಿಹಾರ ಶಿಬಿರಗಳಲ್ಲಿ ವ್ಯಕ್ತವಾದ ಅಭಿಪ್ರಾಯದ ಆಧಾರದಲ್ಲಿ ಉಚಿತ ವಿದ್ಯುತ್ ಯೋಜನೆಯನ್ನು ಘೋಷಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಶಿಬಿರಗಳಲ್ಲಿ 10 ಪ್ರಮುಖ ಯೋಜನೆಗಳಿಗೆ ಜನರಿಂದ ನೋಂದಣಿ ಮಾಡಿಸಲಾಗುತ್ತಿದೆ. ಅದರಲ್ಲಿ ಉಚಿತ ವಿದ್ಯುತ್ ಯೋಜನೆಯೂ ಒಂದು.
ತಿಂಗಳಿಗೆ 100 ಯುನಿಟ್ಗಳ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಗೆಹಲೋತ್ ಈ ವರ್ಷದ ಆರಂಭದಲ್ಲಿ ಮಂಡಿಸಿದ್ದ ಬಜೆಟ್ನಲ್ಲಿ ಘೋಷಿಸಿದ್ದರು. ರಾಜಸ್ಥಾನದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
Ahead of the Assembly election scheduled later this year, Rajasthan chief minister (CM) Ashok Gehlot on Wednesday declared that families will get free electricity for up to 100 units, while a fixed rate for the next 100 units will be provided.“The first 100 units of electricity will be given free of cost to families who consume more than 100 units per month. That is, no matter how much the bill comes, they will not have to pay any electricity charge for the first 100 units," he tweeted.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm