ಬ್ರೇಕಿಂಗ್ ನ್ಯೂಸ್
01-06-23 08:22 pm HK News Desk ದೇಶ - ವಿದೇಶ
ಗುಜರಾತ್, ಜೂನ್ 1: ತಾಯಿ ಗದರಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್ನ ಜಾಮ್ನಗರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಜೇನಿಶಾ ಅಭಂಗಿ ಎಂದು ಗುರುತಿಸಲಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇನಿಶಾ ಹಾಗೂ ಆಕೆಯ ತಾಯಿ ಊರ್ಮಿಳಾ ಬೇಸಿಗೆ ರಜೆ ಕಳೆಯಲೆಂದು ಮಾವನ ಮನೆಗೆ ಬಂದಿದ್ದರು. ಈ ವೇಳೆ ಬಾಲಕಿಯು ಮೊಬೈಲ್ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವುದನ್ನು ಗಮನಿಸಿದ ಊರ್ಮಿಳಾ ಆಕೆಗೆ ಗದರಿಸಿದ್ದಳು. ತದನಂತರ ಸಿಟ್ಟಿಗೆದ್ದ ಬಾಲಕಿ ಕೊಠಡಿಯೊಳಗೆ ಹೋಗಿದ್ದಳು.
ಆದರೆ ಮನೆಯವರು ಹಾಗೂ ಬಾಲಕಿಯ ತಾಯಿಯು ಆಕೆ ಆಟವಾಡಲು ಹೊರಗಡೆ ಹೋಗಿದ್ದಾಳೆಂದು ಭಾವಿಸಿದ್ದರು. ಆಕೆ ವಾಪಸ್ ಬಾರದೆ ಇದ್ದಾಗ ಕುಟುಂಬದವರು ತಮ್ಮ ನೆರೆಹೊರೆಯವರು ಹಾಗೂ ಬಾಲಕಿಯ ಸ್ನೇಹಿತರ ಬಳಿ ಜೇನಿಶಾ ಬಗ್ಗೆ ವಿಚಾರಿಸಿದ್ದರು. ಕೊನೆಗೆ ರೂಮ್ ಬಾಗಿಲು ತೆರೆದು ನೋಡಿದಾಗ ಬಾಲಕಿಯು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಅದಾಗಲೇ ಮೃತಪಟ್ಟಿದ್ದಳು. ಇನ್ನು ಘಟನೆ ಕುರಿತು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
Summer holidays offers a much-needed respite from school. Children can relax, rejuvenate, and pursue their interests outside of the classroom, but after COVID, children are now spending more time on screens. However, mobile addiction turned fatal for a teen in Gujarat's Jamnagar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm