ಬ್ರೇಕಿಂಗ್ ನ್ಯೂಸ್
06-06-23 08:18 pm HK News Desk ದೇಶ - ವಿದೇಶ
ಭುವನೇಶ್ವರ್, ಜೂನ್ 6: ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತ ಸಂದರ್ಭದಲ್ಲಿ ಬೋಗಿಗಳಲ್ಲಿ ವಿದ್ಯುತ್ ಪ್ರವಹಿಸಿ 40 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಅಪಘಾತದಲ್ಲಿ ಒಟ್ಟು 278 ಪ್ರಯಾಣಿಕರು ಮೃತಪಟ್ಟಿದ್ದಾರೆ. ಇವರಲ್ಲಿ 40 ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಈ ಕಾರಣದಿಂದ ವಿದ್ಯುತ್ ಪ್ರವಹಿಸಿ ಸಾವು ಸಂಭವಿಸಿರಬೇಕೆಂದು ಶಂಕಿಸಲಾಗಿದೆ.


ಬಾಲೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಈ ಕುರಿತು ಮಾಹಿತಿಗಳಿವೆ. ರೈಲು ಮಾರ್ಗದಲ್ಲಿನ ವಿದ್ಯುತ್ ತಂತಿಗಳು ಅಪಘಾತದ ನಂತರ ತುಂಡಾಗಿ ಬಿದ್ದವು. ಅವು ಕೆಲ ಬೋಗಿಗಳಿಗೆ ತಗುಲಿದ್ದರಿಂದ ಒಳಗೆ ಸಿಲುಕಿದ ಪ್ರಯಾಣಿಕರಿಗೆ ವಿದ್ಯುತ್ ಪ್ರವಹಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.


ಕುಮಾರ ನಾಯಕ್ ಪ್ರತಿಕ್ರಿಯಿಸಿ, 'ರೈಲುಗಳ ಡಿಕ್ಕಿಯಿಂದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಇನ್ನೂ ಕೆಲವರು ರೈಲು ಹಳಿಗಳ ಮೇಲ್ಭಾಗದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿ ತುಂಡಾಗಿ ಬೋಗಿಯ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಹೌರಾ-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್, ಬೆಂಗಳೂರು-ಹೌರಾ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಜೂನ್ 2ರಂದು ಸಂಜೆ 7.20ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಇದರಲ್ಲಿ 278 ಪ್ರಯಾಣಿಕರು ಮೃತಪಟ್ಟು, ಸುಮಾರು 1200 ಜನರು ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ವಂಸಕ ಕೃತ್ಯ ನಡೆದಿದೆ ಎಂಬ ರೈಲ್ವೆ ಮಂಡಳಿಯ ಶಿಫಾರಸಿನ ಮೇಲೆ ಸಿಬಿಐ ತನಿಖೆ ಆರಂಭಿಸಿದೆ.
At least 40 passengers of the ill-fated Coromandel Express are said to be electrocuted by snapped overhead cables as they did not have any external injury. The cables reportedly snapped after the Yesvantpur-Howrah Express crashed into the derailed bogies of the Coromandel train in Odisha’s Balasore. The claim made by a police officer, who oversaw the rescue operation, matches with the FIR that states electrocution as the cause of several deaths after live overhead cable
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm