ಬ್ರೇಕಿಂಗ್ ನ್ಯೂಸ್
06-06-23 08:18 pm HK News Desk ದೇಶ - ವಿದೇಶ
ಭುವನೇಶ್ವರ್, ಜೂನ್ 6: ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತ ಸಂದರ್ಭದಲ್ಲಿ ಬೋಗಿಗಳಲ್ಲಿ ವಿದ್ಯುತ್ ಪ್ರವಹಿಸಿ 40 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಅಪಘಾತದಲ್ಲಿ ಒಟ್ಟು 278 ಪ್ರಯಾಣಿಕರು ಮೃತಪಟ್ಟಿದ್ದಾರೆ. ಇವರಲ್ಲಿ 40 ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಈ ಕಾರಣದಿಂದ ವಿದ್ಯುತ್ ಪ್ರವಹಿಸಿ ಸಾವು ಸಂಭವಿಸಿರಬೇಕೆಂದು ಶಂಕಿಸಲಾಗಿದೆ.


ಬಾಲೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಈ ಕುರಿತು ಮಾಹಿತಿಗಳಿವೆ. ರೈಲು ಮಾರ್ಗದಲ್ಲಿನ ವಿದ್ಯುತ್ ತಂತಿಗಳು ಅಪಘಾತದ ನಂತರ ತುಂಡಾಗಿ ಬಿದ್ದವು. ಅವು ಕೆಲ ಬೋಗಿಗಳಿಗೆ ತಗುಲಿದ್ದರಿಂದ ಒಳಗೆ ಸಿಲುಕಿದ ಪ್ರಯಾಣಿಕರಿಗೆ ವಿದ್ಯುತ್ ಪ್ರವಹಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.


ಕುಮಾರ ನಾಯಕ್ ಪ್ರತಿಕ್ರಿಯಿಸಿ, 'ರೈಲುಗಳ ಡಿಕ್ಕಿಯಿಂದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಇನ್ನೂ ಕೆಲವರು ರೈಲು ಹಳಿಗಳ ಮೇಲ್ಭಾಗದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿ ತುಂಡಾಗಿ ಬೋಗಿಯ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಹೌರಾ-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್, ಬೆಂಗಳೂರು-ಹೌರಾ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಜೂನ್ 2ರಂದು ಸಂಜೆ 7.20ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಇದರಲ್ಲಿ 278 ಪ್ರಯಾಣಿಕರು ಮೃತಪಟ್ಟು, ಸುಮಾರು 1200 ಜನರು ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ವಂಸಕ ಕೃತ್ಯ ನಡೆದಿದೆ ಎಂಬ ರೈಲ್ವೆ ಮಂಡಳಿಯ ಶಿಫಾರಸಿನ ಮೇಲೆ ಸಿಬಿಐ ತನಿಖೆ ಆರಂಭಿಸಿದೆ.
At least 40 passengers of the ill-fated Coromandel Express are said to be electrocuted by snapped overhead cables as they did not have any external injury. The cables reportedly snapped after the Yesvantpur-Howrah Express crashed into the derailed bogies of the Coromandel train in Odisha’s Balasore. The claim made by a police officer, who oversaw the rescue operation, matches with the FIR that states electrocution as the cause of several deaths after live overhead cable
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm