ಬ್ರೇಕಿಂಗ್ ನ್ಯೂಸ್
31-10-20 12:16 pm Headline Karnataka News Network ದೇಶ - ವಿದೇಶ
ಅಯೋಧ್ಯೆ, ಅಕ್ಟೋಬರ್ 30: ಸುದೀರ್ಘ 28 ವರ್ಷಗಳ ಬಳಿಕ ದೀಪಾವಳಿ ಹಬ್ಬಕ್ಕೆ ಅಯೋಧ್ಯೆ ಝಗಮಗಿಸಲಿದೆ. ಈವರೆಗೂ ಟೆಂಟ್ ಒಳಗಿದ್ದ ರಾಮನ ವಿಗ್ರಹಕ್ಕೆ ದೀಪಗಳ ಹಬ್ಬದ ಸಡಗರದ ನಡುವೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರತಿ ಎತ್ತಲಿದ್ದಾರೆ.
1992ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದ ಬಳಿಕ ವಿವಾದಿತ ಪ್ರದೇಶವಾಗಿದ್ದ ಅಯೋಧ್ಯೆಯಲ್ಲಿ ಯಾವುದೇ ಹಬ್ಬಗಳ ಆಚರಣೆಗೂ ಅನುಮತಿ ಇರಲಿಲ್ಲ. ಈ ಬಾರಿ ಅಯೋಧ್ಯೆ ವಿವಾದ ಮುಕ್ತವಾಗಿದ್ದು, ಭವ್ಯ ರಾಮಮಂದಿರ ನಿರ್ಮಾಣಕ್ಕೆ ಕಾಮಗಾರಿ ನಡೆಯುತ್ತಿದೆ. ಇದೇ ವೇಳೆ, ದೀಪಾವಳಿ ಹಬ್ಬವನ್ನು ಸಡಗರದಿಂದ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.


ಇಷ್ಟು ವರ್ಷಗಳ ಕಾಲ ಪುಟ್ಟ ಟೆಂಟ್ ನಲ್ಲಿದ್ದ ರಾಮನ ವಿಗ್ರಹವನ್ನು ಮಂದಿರ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಆವರಣಕ್ಕೆ ಸ್ಥಳಾಂತರಿಸಿ ಪೂಜಿಸಲಾಗುತ್ತಿದೆ. ದಿನವೂ ಅರ್ಚನೆ, ಪೂಜೆಗಳು ನಡೆಯುತ್ತಿವೆ. ಇದೇ ಜಾಗದಲ್ಲಿ ಈ ಬಾರಿ ದೀಪಾವಳಿ ಆಚರಿಸಲಾಗುತ್ತಿದೆ. ದೀಪಾವಳಿಗೆ ಇಡೀ ರಾಮಮಂದಿರ ಪರಿಸರದಲ್ಲಿ ಲಕ್ಷಾಂತರ ದೀಪಗಳನ್ನು ಹಚ್ಚಿ ಬೆಳಗಿಸಲು ಯೋಜನೆ ಹಾಕಲಾಗಿದೆ. ಮಂದಿರದ ಆವರಣದಲ್ಲಿ ಅಲ್ಲದೆ, ರಾಮ ನಿರ್ಯಾಣಗೊಂಡ ಸರಯೂ ನದಿ ತೀರದಲ್ಲಿಯೂ ಲಕ್ಷಾಂತರ ದೀಪಗಳನ್ನು ಬೆಳಗಿಸಿ ವಿಶಿಷ್ಟವಾಗಿ ದೀಪಗಳ ಹಬ್ಬವನ್ನು ಆಚರಿಸಲು ಯೋಜನೆ ಹಾಕುತ್ತಿದ್ದಾರೆ.
ಕಳೆದ ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆದಿತ್ತು. ಅಂದು ಕೂಡ ಇಡೀ ಅಯೋಧ್ಯೆಯನ್ನು ಶೃಂಗರಿಸಿ ವಿಶಿಷ್ಟವಾಗಿ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಭೂಮಿಪೂಜೆ ನೆರವೇರಿಸಿದ್ದರು. ಈ ಬಾರಿ ಮೋದಿ ದೀಪಾವಳಿಗೆ ಅಯೋಧ್ಯೆ ಅಥವಾ ವಾರಣಾಸಿಗೆ ಬರುವುದು ಇನ್ನೂ ಅಂತಿಮಗೊಂಡಿಲ್ಲ.
For the first time since 1992, Diwali will be celebrated in the earlier disputed area where the foundation stone for the Ram Temple construction was laid back in August.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm