ಬ್ರೇಕಿಂಗ್ ನ್ಯೂಸ್
11-06-23 10:36 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 11: ಈಕ್ವಟೋರಿಯಲ್ ಗಿನಿಯಾ ಮತ್ತು ನೈಜೀರಿಯ ದೇಶಗಳು ವಶಕ್ಕೆ ತೆಗೆದುಕೊಂಡಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿ ಒಂಬತ್ತು ತಿಂಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ.
ಮಾರ್ಷಲ್ ಐಲ್ಯಾಂಡ್ಸ್ಗೆ ಸೇರಿದ ತೈಲ ಟ್ಯಾಂಕರ್ ಎಂ.ಟಿ ಹಿರೋಯಿಕ್ ಇಡುನ್ ಮತ್ತು ಅದರ 26 ಸಿಬ್ಬಂದಿಯನ್ನು ಕಳೆದ ವರ್ಷ ಆಗಸ್ಟ್ನಲ್ಲಿ ಬಂಧಿಸಲಾಗಿತ್ತು. ಅವರಲ್ಲಿ ಒಂಬತ್ತು ಮಂದಿ ಭಾರತೀಯರಿದ್ದರು.


ಈಕ್ವಟೋರಿಯಲ್ ಗಿನಿಯಾ ಮತ್ತು ನೈಜೀರಿಯ ದೇಶದ ಜೊತೆ ಭಾರತ ಸರ್ಕಾರ ಸುದೀರ್ಘ ಕಾಲ ಸಂಧಾನ ನಡೆಸಿದ ಬಳಿಕ ಸಿಬ್ಬಂದಿಯ ಮೇಲಿದ್ದ ಎಲ್ಲಾ ಆರೋಪಗಳನ್ನು ಕೈಬಿಡಲಾಗಿದೆ ಮತ್ತು ದಂಡ ಕಟ್ಟಿಸಿಕೊಂಡು ಹಡಗನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸೆರೆಯಲ್ಲಿದ್ದ ಸಿಬ್ಬಂದಿಗೆ ಅವರ ಕುಟುಂಬದ ಜೊತೆ ಮಾತನಾಡಲು ಮತ್ತು ಆ ಎರಡು ದೇಶಗಳಲ್ಲಿಯ ಭಾರತದ ರಾಯಭಾರ ಕಚೇರಿ ಜೊತೆ ಸಂಪರ್ಕದಲ್ಲಿ ಇರಲು ಅವಕಾಶ ನೀಡಲಾಗಿತ್ತು ಎನ್ನಲಾಗಿದೆ. ತೈಲ ಕಳವು ಆರೋಪದ ಮೇಲೆ ಎಂ.ಟಿ ಹೆರೋಯಿಕ್ ಇಡುನ್ ಹಡಗನ್ನು ನೈಜೀರಿಯ ನೌಕಾಪಡೆ ವಶಕ್ಕೆ ತೆಗೆದುಕೊಂಡಿತ್ತು.
Sixteen Indian sailors who got detained in Equatorial Guinea and Nigeria nine months back returned home on Saturday. The sailors faced accusations of oil theft by the Nigerian authorities and underwent trials and when a settlement was agreed upon, they were set free.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm