ಬ್ರೇಕಿಂಗ್ ನ್ಯೂಸ್
12-06-23 06:14 pm HK News Desk ದೇಶ - ವಿದೇಶ
ಜೈಪುರ, ಜೂನ್ 12: ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ಮೇ 26ರಂದು ನಡೆದ ಸಾಮೂಹಿಕ ಮದುವೆ ಕಾರ್ಯಕ್ರಮ, ಬರೋಬ್ಬರಿ 2,143 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ವಿಶ್ವ ದಾಖಲೆಯೇ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿವ ಪ್ರಮೋದ್ ಜೈನ್ ಭಾಯಾ ಅವರ ಸಮ್ಮುಖದಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಯಿತು. ಹಸೆ ಮಣೆ ಏರಿದ ದಂಪತಿಗಳಿಗೆ ಗಣ್ಯರು ಆಶೀರ್ವದಿಸಿದರು.

ಅಂದ ಹಾಗೆ ಈ ಸಾಮೂಹಿಕ ಮದುವೆ ಸಮಾರಂಭವು ಎರಡು ದಾಖಲೆಗಳನ್ನು ನಿರ್ಮಿಸಿದೆ. 12 ಗಂಟೆಗಳಲ್ಲಿ ನಡೆದ ಅತೀ ಹೆಚ್ಚು ಮದುವೆ ಹಾಗೂ 24 ಗಂಟೆಗಳಲ್ಲಿ ನಡೆದ ಅತಿ ಹೆಚ್ಚು ಮದುವೆ ಎನ್ನುವ ದಾಖಲೆ ಈ ಸಾಮೂಹಿಕ ಮದುವೆ ಸಮಾರಂಭಕ್ಕೆ ದೊರಕಿದೆ. ಈ ಹಿಂದೆ 2013ರಲ್ಲಿ 963 ಜೋಡಿ ಮದುವೆಯಾಗಿದ್ದು, ಅದು ದಾಖಲೆಯನ್ನು ಹೊಂದಿತ್ತು. ಅದರ ದಾಖಲೆಯನ್ನು ಈಗಿನ ಸಮಾರಂಭ ಮುರಿದಿದೆ.


ಶ್ರೀ ಮಹಾವೀರ ಗೋಶಾಲಾ ಕಲ್ಯಾಣ ಸಂಸ್ಥಾನವು ಈ ಸಾಮೂಹಿಕ ವಿವಾಹವನ್ನು ಏರ್ಪಡಿಸಿತ್ತು. ಅದರಲ್ಲಿ ಹಿಂದೂಗಳ ಜತೆ ಮುಸ್ಲಿಂ ಜೋಡಿಗಳೂ ಮದುವೆ ಮಾಡಿಕೊಂಡಿರುವುದು ವಿಶೇಷ. ಪ್ರತಿ ದಂಪತಿಗೆ ಆಯಾ ಸಮುದಾಯದ ಪುರೋಹಿತರು, ಕ್ವಾಜಿಗಳ ಕೈಯಿಂದಲೇ ಮದುವೆ ಮಾಡಿಸಲಾಯಿತು. ಮದುವೆ ಮುಗಿದ ನಂತರ ರಾಜಸ್ಥಾನ ಸರ್ಕಾರದ ಅಧಿಕಾರಿಗಳು ದಂಪತಿಗಳಿಗೆ ಮದುವೆ ಪ್ರಮಾಣಪತ್ರಗಳನ್ನು ನೀಡಿದರು.

ಮದುವೆ ನಂತರ ಪ್ರತಿ ದಂಪತಿಗೆ ಆಭರಣ, ಹಾಸಿಗೆ, ಅಗತ್ಯ ಅಡುಗೆ ಪಾತ್ರೆಗಳು, ದೂರದರ್ಶನ, ರೆಫ್ರಿಜರೇಟರ್ಮ ಕೂಲರ್ನಂತಹ ಗೃಹೋಪಯೋಗಿ ಉಪಕರಣಗಳನ್ನು ಉಡುಗೊರೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಒಟ್ಟು ಹತ್ತು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು, ನೂತನ ವಧು ವರರಿಗೆ ಆಶೀರ್ವದಿಸಿದ್ದಾರೆ.
A mass wedding ceremony in Rajasthan’s Baran has set a new world record, bringing together 2,143 couples in a joyous celebration of love and commitment. Organized by Shri Mahaveer Goshala Kalyan Sansthan, a registered trust dedicated to serving marginalized communities, this remarkable event aimed to help underprivileged individuals fulfil their dreams of marriage.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm