ಬ್ರೇಕಿಂಗ್ ನ್ಯೂಸ್
12-06-23 06:14 pm HK News Desk ದೇಶ - ವಿದೇಶ
ಜೈಪುರ, ಜೂನ್ 12: ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ಮೇ 26ರಂದು ನಡೆದ ಸಾಮೂಹಿಕ ಮದುವೆ ಕಾರ್ಯಕ್ರಮ, ಬರೋಬ್ಬರಿ 2,143 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ವಿಶ್ವ ದಾಖಲೆಯೇ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿವ ಪ್ರಮೋದ್ ಜೈನ್ ಭಾಯಾ ಅವರ ಸಮ್ಮುಖದಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಯಿತು. ಹಸೆ ಮಣೆ ಏರಿದ ದಂಪತಿಗಳಿಗೆ ಗಣ್ಯರು ಆಶೀರ್ವದಿಸಿದರು.

ಅಂದ ಹಾಗೆ ಈ ಸಾಮೂಹಿಕ ಮದುವೆ ಸಮಾರಂಭವು ಎರಡು ದಾಖಲೆಗಳನ್ನು ನಿರ್ಮಿಸಿದೆ. 12 ಗಂಟೆಗಳಲ್ಲಿ ನಡೆದ ಅತೀ ಹೆಚ್ಚು ಮದುವೆ ಹಾಗೂ 24 ಗಂಟೆಗಳಲ್ಲಿ ನಡೆದ ಅತಿ ಹೆಚ್ಚು ಮದುವೆ ಎನ್ನುವ ದಾಖಲೆ ಈ ಸಾಮೂಹಿಕ ಮದುವೆ ಸಮಾರಂಭಕ್ಕೆ ದೊರಕಿದೆ. ಈ ಹಿಂದೆ 2013ರಲ್ಲಿ 963 ಜೋಡಿ ಮದುವೆಯಾಗಿದ್ದು, ಅದು ದಾಖಲೆಯನ್ನು ಹೊಂದಿತ್ತು. ಅದರ ದಾಖಲೆಯನ್ನು ಈಗಿನ ಸಮಾರಂಭ ಮುರಿದಿದೆ.


ಶ್ರೀ ಮಹಾವೀರ ಗೋಶಾಲಾ ಕಲ್ಯಾಣ ಸಂಸ್ಥಾನವು ಈ ಸಾಮೂಹಿಕ ವಿವಾಹವನ್ನು ಏರ್ಪಡಿಸಿತ್ತು. ಅದರಲ್ಲಿ ಹಿಂದೂಗಳ ಜತೆ ಮುಸ್ಲಿಂ ಜೋಡಿಗಳೂ ಮದುವೆ ಮಾಡಿಕೊಂಡಿರುವುದು ವಿಶೇಷ. ಪ್ರತಿ ದಂಪತಿಗೆ ಆಯಾ ಸಮುದಾಯದ ಪುರೋಹಿತರು, ಕ್ವಾಜಿಗಳ ಕೈಯಿಂದಲೇ ಮದುವೆ ಮಾಡಿಸಲಾಯಿತು. ಮದುವೆ ಮುಗಿದ ನಂತರ ರಾಜಸ್ಥಾನ ಸರ್ಕಾರದ ಅಧಿಕಾರಿಗಳು ದಂಪತಿಗಳಿಗೆ ಮದುವೆ ಪ್ರಮಾಣಪತ್ರಗಳನ್ನು ನೀಡಿದರು.

ಮದುವೆ ನಂತರ ಪ್ರತಿ ದಂಪತಿಗೆ ಆಭರಣ, ಹಾಸಿಗೆ, ಅಗತ್ಯ ಅಡುಗೆ ಪಾತ್ರೆಗಳು, ದೂರದರ್ಶನ, ರೆಫ್ರಿಜರೇಟರ್ಮ ಕೂಲರ್ನಂತಹ ಗೃಹೋಪಯೋಗಿ ಉಪಕರಣಗಳನ್ನು ಉಡುಗೊರೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಒಟ್ಟು ಹತ್ತು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು, ನೂತನ ವಧು ವರರಿಗೆ ಆಶೀರ್ವದಿಸಿದ್ದಾರೆ.
A mass wedding ceremony in Rajasthan’s Baran has set a new world record, bringing together 2,143 couples in a joyous celebration of love and commitment. Organized by Shri Mahaveer Goshala Kalyan Sansthan, a registered trust dedicated to serving marginalized communities, this remarkable event aimed to help underprivileged individuals fulfil their dreams of marriage.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm