ಬ್ರೇಕಿಂಗ್ ನ್ಯೂಸ್
12-06-23 09:54 pm HK News Desk ದೇಶ - ವಿದೇಶ
ಭುವನೇಶ್ವರ್, ಜೂನ್ 12: ಒಡಿಶಾ ರೈಲು ದುರಂತ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಬಹನಾಗ ರೈಲು ನಿಲ್ದಾಣದ ಅಸಿಸ್ಟೆಂಟ್ ಸ್ಟೇಶನ್ ಮ್ಯಾನೇಜರ್ ಸಹಿತ ಐವರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಒಂದು ವಾರದಿಂದ ಹತ್ತು ಮಂದಿ ಸಿಬಿಐ ಅಧಿಕಾರಿಗಳು ರೈಲು ದುರಂತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಒಂಬತ್ತು ಮಂದಿ ರೈಲ್ವೇ ಇಲಾಖೆಯ ಅಧಿಕಾರಿಗಳ ಬಗ್ಗೆ ನಿಗಾ ಇಟ್ಟಿದ್ದು, ಹಲವರನ್ನು ವಿಚಾರಣೆ ನಡೆಸಿದ್ದಾರೆ. ಇದೀಗ ರೈಲು ದುರಂತ ನಡೆದಿರುವ ಬಹನಾಗ ರೈಲ್ವೇ ನಿಲ್ದಾಣದ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಗೇಟ್ ಮ್ಯಾನ್ ಅನ್ನು ವಶಕ್ಕೆ ಪಡೆದು ಗ್ರಿಲ್ ನಡೆಸುತ್ತಿದ್ದಾರೆ.ಇದೇ ವೇಳೆ ಬಹನಾಗ ಪೊಲೀಸ್ ಠಾಣೆಯನ್ನೂ ಸೀಲ್ ಮಾಡಲಾಗಿದೆ. ಅಲ್ಲದೆ, ವಿಧಿ ವಿಜ್ಞಾನ ತಜ್ಞರು ಸ್ಥಳದಿಂದ ಹಲವು ತಾಂತ್ರಿಕ ಸಾಕ್ಷ್ಯಗಳನ್ನು ಪತ್ತೆ ಮಾಡಿದ್ದಾರೆ. ಬಹನಾಗ ಬಝಾರ್ ರೈಲು ನಿಲ್ದಾಣದಲ್ಲಿ ಸಿಬಿಐ ಅನುಮತಿಯಿಲ್ಲದೆ ಯಾವುದೇ ರೈಲು ನಿಲ್ಲದಂತೆ ಸೂಚನೆ ನೀಡಲಾಗಿದೆ.
ಇದಲ್ಲದೆ, ರೈಲು ನಿಲ್ದಾಣದ ಎಲ್ಲ ಕಂಪ್ಯೂಟರ್ ಗಳ ಹಾರ್ಡ್ ಡಿಸ್ಕನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರೈಲು ದುರಂತ ನಡೆದ ಜೂನ್ 2ರಂದು ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ವ್ಯಕ್ತಿಗಳು, ಎಕ್ಸ್ ಚೇಂಜ್ ಬುಕ್ ನಲ್ಲಿ ನಮೂದಾಗಿರುವ ಖಾಸಗಿ ವ್ಯಕ್ತಿಗಳ ಮೊಬೈಲ್ ನಂಬರ್ ಗಳನ್ನು ಸಂಗ್ರಹಿಸಿದ್ದಾರೆ. ರೈಲು ನಿಲ್ದಾಣದ ರಿಲೇ ರೂಮ್, ಪ್ಯಾನೆಲ್ ರೂಮ್, ಡಾಟಾ ಲಾಕರ್ ಕೊಠಡಿಯನ್ನು ಪೂರ್ತಿ ವಶಕ್ಕೆ ಪಡೆದಿದ್ದಾರೆ. ಜೂನ್ 2ರಂದು ಸಂಜೆ 7 ಗಂಟೆ ಸುಮಾರಿಗೆ ಬಹನಾಗ ರೈಲು ನಿಲ್ದಾಣದ ಎದುರಲ್ಲೇ ಮೂರು ರೈಲುಗಳು ಒಂದಕ್ಕೊಂದು ಡಿಕ್ಕಿಯಾಗಿ 288 ಜನರು ಸಾವಿಗೀಡಾಗಿದ್ದ ಘಟನೆ ನಡೆದಿತ್ತು.
Odisha Train Tragedy CBI detains Bahanaga Assistant Station Manager Four others Seals Accident Site.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm