ಬ್ರೇಕಿಂಗ್ ನ್ಯೂಸ್
12-06-23 09:54 pm HK News Desk ದೇಶ - ವಿದೇಶ
ಭುವನೇಶ್ವರ್, ಜೂನ್ 12: ಒಡಿಶಾ ರೈಲು ದುರಂತ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಬಹನಾಗ ರೈಲು ನಿಲ್ದಾಣದ ಅಸಿಸ್ಟೆಂಟ್ ಸ್ಟೇಶನ್ ಮ್ಯಾನೇಜರ್ ಸಹಿತ ಐವರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಒಂದು ವಾರದಿಂದ ಹತ್ತು ಮಂದಿ ಸಿಬಿಐ ಅಧಿಕಾರಿಗಳು ರೈಲು ದುರಂತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಒಂಬತ್ತು ಮಂದಿ ರೈಲ್ವೇ ಇಲಾಖೆಯ ಅಧಿಕಾರಿಗಳ ಬಗ್ಗೆ ನಿಗಾ ಇಟ್ಟಿದ್ದು, ಹಲವರನ್ನು ವಿಚಾರಣೆ ನಡೆಸಿದ್ದಾರೆ. ಇದೀಗ ರೈಲು ದುರಂತ ನಡೆದಿರುವ ಬಹನಾಗ ರೈಲ್ವೇ ನಿಲ್ದಾಣದ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಗೇಟ್ ಮ್ಯಾನ್ ಅನ್ನು ವಶಕ್ಕೆ ಪಡೆದು ಗ್ರಿಲ್ ನಡೆಸುತ್ತಿದ್ದಾರೆ.ಇದೇ ವೇಳೆ ಬಹನಾಗ ಪೊಲೀಸ್ ಠಾಣೆಯನ್ನೂ ಸೀಲ್ ಮಾಡಲಾಗಿದೆ. ಅಲ್ಲದೆ, ವಿಧಿ ವಿಜ್ಞಾನ ತಜ್ಞರು ಸ್ಥಳದಿಂದ ಹಲವು ತಾಂತ್ರಿಕ ಸಾಕ್ಷ್ಯಗಳನ್ನು ಪತ್ತೆ ಮಾಡಿದ್ದಾರೆ. ಬಹನಾಗ ಬಝಾರ್ ರೈಲು ನಿಲ್ದಾಣದಲ್ಲಿ ಸಿಬಿಐ ಅನುಮತಿಯಿಲ್ಲದೆ ಯಾವುದೇ ರೈಲು ನಿಲ್ಲದಂತೆ ಸೂಚನೆ ನೀಡಲಾಗಿದೆ.
ಇದಲ್ಲದೆ, ರೈಲು ನಿಲ್ದಾಣದ ಎಲ್ಲ ಕಂಪ್ಯೂಟರ್ ಗಳ ಹಾರ್ಡ್ ಡಿಸ್ಕನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರೈಲು ದುರಂತ ನಡೆದ ಜೂನ್ 2ರಂದು ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ವ್ಯಕ್ತಿಗಳು, ಎಕ್ಸ್ ಚೇಂಜ್ ಬುಕ್ ನಲ್ಲಿ ನಮೂದಾಗಿರುವ ಖಾಸಗಿ ವ್ಯಕ್ತಿಗಳ ಮೊಬೈಲ್ ನಂಬರ್ ಗಳನ್ನು ಸಂಗ್ರಹಿಸಿದ್ದಾರೆ. ರೈಲು ನಿಲ್ದಾಣದ ರಿಲೇ ರೂಮ್, ಪ್ಯಾನೆಲ್ ರೂಮ್, ಡಾಟಾ ಲಾಕರ್ ಕೊಠಡಿಯನ್ನು ಪೂರ್ತಿ ವಶಕ್ಕೆ ಪಡೆದಿದ್ದಾರೆ. ಜೂನ್ 2ರಂದು ಸಂಜೆ 7 ಗಂಟೆ ಸುಮಾರಿಗೆ ಬಹನಾಗ ರೈಲು ನಿಲ್ದಾಣದ ಎದುರಲ್ಲೇ ಮೂರು ರೈಲುಗಳು ಒಂದಕ್ಕೊಂದು ಡಿಕ್ಕಿಯಾಗಿ 288 ಜನರು ಸಾವಿಗೀಡಾಗಿದ್ದ ಘಟನೆ ನಡೆದಿತ್ತು.
Odisha Train Tragedy CBI detains Bahanaga Assistant Station Manager Four others Seals Accident Site.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm