ಬ್ರೇಕಿಂಗ್ ನ್ಯೂಸ್
02-11-20 11:30 am Headline Karnataka News Network ದೇಶ - ವಿದೇಶ
ಶ್ರೀನಗರ, ನವೆಂಬರ್ 02: ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಆಪರೇಶನಲ್ ಚೀಫ್ ಆಗಿದ್ದ ಡಾ.ಸೈಫುಲ್ಲಾ ಸೇನಾ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.
ಜಮ್ಮು ಕಾಶ್ಮೀರದ ಶ್ರೀನಗರದ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿದ್ದು, ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಕಮಾಂಡರ್ ಆಗಿದ್ದ ಸೈಫುಲ್ಲಾ ಹತನಾಗಿದ್ದಾನೆ. ಈ ವೇಳೆ ಆತನ ಜೊತೆಗಿದ್ದ ಉಗ್ರನನ್ನು ಭದ್ರತಾ ಪಡೆಗಳು ಜೀವಂತವಾಗಿ ವಶಕ್ಕೆ ಪಡೆದಿವೆ ಎಂದು ಐಜಿಪಿ ವಿಜಯ ಕುಮಾರ್ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಪೊಲೀಸರು ಮತ್ತು ಸಿಆರ್ ಪಿಎಫ್ ಪಡೆಗಳು ರಂಗ್ರೆತ್ ಏರಿಯಾದಲ್ಲಿ ಮೂವರು ಉಗ್ರರು ಅಡಗಿಕೊಂಡಿರುವುದನ್ನು ಪತ್ತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಒಬ್ಬಾತ ಜೀವಂತ ಸೆರೆಸಿಕ್ಕಿದ್ದಾನೆ. ಈ ವೇಳೆ ಸೈಫುಲ್ಲಾ ಮಿರ್ ಎಂಬಾತ ಸಾವನ್ನಪ್ಪಿದ್ದಾನೆ.


ಸೈಫುಲ್ಲಾ ಮಿರ್ ಗಾಝಿ ಹೈದರ್ ಅಲಿಯಾಸ್ ಡಾಕ್ಟರ್ ಸಾಹಬ್ 2014ರಲ್ಲಿ ಹಿಜ್ಬುಲ್ ಉಗ್ರ ಸಂಘಟನೆ ಸೇರಿದ್ದ. ಪುಲ್ವಾಮಾ ಜಿಲ್ಲೆಯ ಮಲಾಂಗ್ ಪೋರಾ ನಿವಾಸಿಯಾಗಿರುವ ಸೈಫುಲ್ಲಾನನ್ನು ರಿಯಾಜ್ ನೈಕು ಎಂಬ ಉಗ್ರ ಹಿಜ್ಬುಲ್ ಸಂಘಟನೆ ಸೇರ್ಪಡೆ ಮಾಡಿದ್ದ. ಅಲ್ಲದೆ, ಸೈಫುಲ್ಲಾನಿಗೆ ಗಾಝಿ ಹೈದರ್ ಎಂದು ನಾಮಕರಣ ಮಾಡಿದ್ದ. ಹಿಜ್ಬುಲ್ ಸಂಘಟನೆಯ ಕಮಾಂಡರ್ ಆಗಿದ್ದ ರಿಯಾಜ್ ನೈಕು ಕಳೆದ ಮೇ ತಿಂಗಳಲ್ಲಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದ. ಆಬಳಿಕ ಸೈಫುಲ್ಲಾ ಕಮಾಂಡರ್ ಆಗಿ ಸಂಘಟನೆಯನ್ನು ಮುನ್ನಡೆಸುತ್ತಿದ್ದ.
ಜಮ್ಮು ಕಾಶ್ಮೀರದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಹತ್ತು ಉಗ್ರರಲ್ಲಿ ಸೈಫುಲ್ಲಾ ಒಬ್ಬ. ಭದ್ರತಾ ಪಡೆಗಳು ಇತ್ತೀಚೆಗಷ್ಟೇ ಮೋಸ್ಟ್ ವಾಂಟೆಡ್ ಉಗ್ರರ ಲಿಸ್ಟ್ ರೆಡಿ ಮಾಡಿತ್ತು. ಜಮ್ಮು ಕಾಶ್ಮೀರದಲ್ಲಿ ನಡೆದ ಹಲವು ಉಗ್ರರ ದಾಳಿ ಪ್ರಕರಣಗಳಲ್ಲಿ ಸೈಫುಲ್ಲಾ ಮಾಸ್ಟರ್ ಮೈಂಡ್ ಆಗಿದ್ದ. ಈತನನ್ನು ಕೊಂದಿದ್ದಕ್ಕೆ ಡಿಜಿಪಿ ದಿಲ್ ಬಾಘ್, ಭದ್ರತಾ ಪಡೆ ಮತ್ತು ಪೊಲೀಸರನ್ನು ಅಭಿನಂದಿಸಿದ್ದಾರೆ.
Hizbul Mujahideen militant commander Saifullah Mir was killed in an encounter with security forces on the outskirts of Srinagar district Sunday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm