ಬ್ರೇಕಿಂಗ್ ನ್ಯೂಸ್
01-07-23 01:20 pm HK News Desk ದೇಶ - ವಿದೇಶ
ನೈರೋಬಿ, ಜೂ 01: ಲಾರಿಯೊಂದು ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 48 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಪಶ್ಚಿಮ ಕೀನ್ಯಾದ ಲೊಂಡಿಯಾನಿಯಲ್ಲಿ ಶುಕ್ರವಾರ ಸಂಜೆ ನಡೆದಿರುವುದು ವರದಿಯಾಗಿದೆ.
ಹಡಗಿಗೆ ಸಂಬಂಧಿಸಿದ ಸರಕುಗಳನ್ನು ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ಬಳಿಕ ಪಾದಚಾರಿಗಳ ಮೇಲೆ ಎರಗಿದ ಪರಿಣಾಮ ಈ ಭೀಕರ ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ.


ಮಿನಿ ಬಸ್,ಟ್ರಕ್, ಕಾರುಗಳು ಮತ್ತು ಮೋಟಾರ್ಬೈಕ್ಗಳು ಸೇರಿದಂತೆ 6 ಕ್ಕೂ ಹೆಚ್ಚಿನ ವಾಹನಗಳಿಗೆ ಲಾರಿ ಢಿಕ್ಕಿ ಹೊಡೆದು ಪಾದಚಾರಿಗಳಿಗೆ ಢಿಕ್ಕಿ ಹೊಡೆದಿದೆ. ಶುಕ್ರವಾರ ಸಂಜೆಯವರೆಗೆ 48 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.


ರಾತ್ರಿ ಪೂರ್ತಿಯೂ ರಕ್ಷಣಾ ಕಾರ್ಯಾಚರಣೆ ನಡೆದಿದ್ದು ಭಾರೀ ಮಳೆಯು ಕಾರ್ಯಾಚರಣೆಗೆ ಅಡ್ಡಿಪಡಿಸಿತು. ಇನ್ನೂ ಕೆಲವರು ಧ್ವಂಸಗೊಂಡ ವಾಹನಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕೀನ್ಯಾ ರೆಡ್ಕ್ರಾಸ್ ಸೊಸೈಟಿ ಹೇಳಿದೆ.
ಲೊಂಡಿಯಾನಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಸಂಬಂಧ ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ದೇಶವು ಶೋಕಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
At least 48 people were killed in western Kenya when a truck lost control and collided with other vehicles and pedestrians at a junction on Friday night. Several people have sustained injuries and have been taken to hospitals for treatment.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm