ಬ್ರೇಕಿಂಗ್ ನ್ಯೂಸ್
02-11-20 07:46 pm Headline Karnataka News Network ದೇಶ - ವಿದೇಶ
ಮಥುರಾ, ನವೆಂಬರ್ 2 : ಒಂದೆಡೆ ಅಯೋಧ್ಯೆ ರಾಮ ಮಂದಿರದ ಮುಕ್ತಿಯ ಬಳಿಕ ಮುಂದಿನ ಚಳವಳಿ ಮಥುರಾದೆಡೆಗೆ ಎನ್ನುವ ಅಭಿಯಾನ ಕೇಳಿಬರುತ್ತಿದೆ. ಅಲ್ಲಿ ಮಸೀದಿ ಆಗಿ ಪರಿವರ್ತನೆಗೊಂಡಿರುವ ಕೃಷ್ಣನ ಮಂದಿರಗಳನ್ನು ಪುನರ್ ವಶಕ್ಕೆ ಪಡೆದು ದೇವಸ್ಥಾನ ಮಾಡಬೇಕೆಂಬ ಹೋರಾಟದ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ, ಮಥುರಾದಲ್ಲಿರುವ ನಂದಬಾಬಾ ದೇವಸ್ಥಾನಕ್ಕೆ ಬಂದಿದ್ದ ಇಬ್ಬರು ಮುಸ್ಲಿಮರು ನಮಾಜ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದಬಾಬಾ ಮಂದಿರದಲ್ಲಿ ನಮಾಜ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ. ಅಲ್ಲಿನವರ ಮಾಹಿತಿ ಪ್ರಕಾರ, ಇವರಿಬ್ಬರು ಗುರುತು ಮರೆ ಮಾಚಿಕೊಂಡು ದೇವಸ್ಥಾನದ ಒಳ ಪ್ರವೇಶಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಚಾರ ಗೊತ್ತಾಗುತ್ತಲೇ ಅಲ್ಲಿನ ಅರ್ಚಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಆರೋಪಿಗಳ ವಿರುದ್ಧ ಮಾಹಿತಿ ಕಲೆಹಾಕಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳಿಗೆ ದೇವಸ್ಥಾನಕ್ಕೆ ಬರಲು ಸಹಕರಿಸಿದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ದೇವಸ್ಥಾನ ಸೇರಿದಂತೆ ಸುತ್ತಮುತ್ತಲಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Two individuals have been booked by the Uttar Pradesh police after they allegedly offered namaz at a Hindu temple in Mathura on Thursday.Two individuals have been booked by the Uttar Pradesh police after they allegedly offered namaz at a Hindu temple in Mathura on Thursday.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm