ಬ್ರೇಕಿಂಗ್ ನ್ಯೂಸ್
03-07-23 01:36 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 3: ಮಹಾರಾಷ್ಟ್ರದಲ್ಲಿ ಎನ್ಸಿಪಿ ನಾಯಕರ ಬಣ ಅಜಿತ್ ಪವಾರ್ ನೇತೃತ್ವದಲ್ಲಿ ಎನ್ ಡಿಎ ಮೈತ್ರಿಕೂಟ ಸೇರಿದ ಬೆನ್ನಲ್ಲೇ ಬಿಜೆಪಿ ಆಟ ಶುರುವಾಗಿದೆ. ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಕೇಂದ್ರ ಸಂಪುಟ ಸೇರಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸದಸ್ಯರೊಂದಿಗೆ ಮಹತ್ವದ ಸಭೆ ಕರೆದಿರುವುದು ಕುತೂಹಲ ಮೂಡಿಸಿದೆ.
ಕೇಂದ್ರ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ವದಂತಿ ನಡುವೆ ಈ ಸಭೆ ನಡೆಯುತ್ತಿದ್ದು, ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ನವದೆಹಲಿಯ ಪ್ರಗತಿ ಮೈದಾನದ ಕನ್ವೆನ್ಷನ್ ಸೆಂಟರ್ ನಲ್ಲಿ ಈ ಸಭೆ ನಡೆಯಲಿದೆ. ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್ ಸಿಪಿ ನಾಯಕ ಅಜಿತ್ ಪವಾರ್ ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದರು. ಈ ಬೆಳವಣಿಗೆ ರಾಷ್ಟ್ರ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಶರದ್ ಪವಾರ್ ಅವರ ಆಪ್ತರಾಗಿದ್ದ ಪ್ರಫುಲ್ ಪಟೇಲ್ ಸಹ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಸಂಸದರಾಗಿರುವ ಅವರಿಗೆ ಈಗ ಕೇಂದ್ರ ಸಚಿವ ಸ್ಥಾನ ಒಲಿಯಲಿದೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ, ಕರ್ನಾಟಕದ ಮತ್ತೊಬ್ಬ ಸಂಸದನಿಗೆ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿದ್ದು ಯಡಿಯೂರಪ್ಪ ಪುತ್ರ ರಾಘವೇಂದ್ರ ಅವರಿಗೆ ಸಚಿವ ಸ್ಥಾನ ಒಲಿಯುತ್ತೆ ಅನ್ನುವ ಮಾತುಗಳು ಕೇಳಿಬರುತ್ತಿವೆ. ಯಡಿಯೂರಪ್ಪ ಅವರನ್ನು ಮನವೊಲಿಸುವ ಪ್ರಯತ್ನವಾಗಿ ಸಚಿವ ಸ್ಥಾನ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ. ವಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತ ಹೊರತುಪಡಿಸಿ ಬೇರೊಬ್ಬ ವ್ಯಕ್ತಿಯ ನೇಮಕ ಮಾಡುವ ಸಲುವಾಗಿ ಯಡಿಯೂರಪ್ಪ ಪುತ್ರನಿಗೆ ಸಚಿವ ಸ್ಥಾನ ನೀಡಿ ಮನವೊಲಿಸುತ್ತಾರೆಯೇ ಎನ್ನುವ ವದಂತಿಗಳಿವೆ.
NCP chief Sharad Pawar has convened a meeting on July 5 in Mumbai — after Nationalist Congress Party (NCP) leader and former Leader of Opposition Ajit Pawar took an oath as the deputy chief minister of Maharashtra — to discuss the developments and the future course of action, its state unit chief Jayant Patil said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm