ಬ್ರೇಕಿಂಗ್ ನ್ಯೂಸ್
05-08-20 06:23 pm Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 5: ಮುಂಬೈ ಮಹಾನಗರ ಭಾರೀ ಮಳೆಗೆ ತತ್ತರಿಸಿದೆ. ಮಹಾರಾಷ್ಟ್ರ ಕರಾವಳಿಯಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಮುಂಬೈ ಮತ್ತು ಪುಣೆ ಮಳೆ, ಬಿರುಗಾಳಿಗೆ ಅಕ್ಷರಶಃ ನಲುಗಿದೆ.
2005 ರ ಬಳಿಕ ಇದೇ ಮೊದಲ ಬಾರಿಗೆ ಈ ಪರಿ ಮಳೆಯಾಗುತ್ತಿದೆ ಎನ್ನಲಾಗುತ್ತಿದೆ. ಇಂದು ರಾತ್ರಿ ಇನ್ನಷ್ಟು ಮಳೆ ಮತ್ತು ಬಿರುಗಾಳಿ ಎದುರಾಗುವ ಬಗ್ಗೆ ಸೂಚನೆ ನೀಡಲಾಗಿದೆ. ಗಂಟೆಗೆ 107 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಅಲ್ಲದೆ, ಗಂಟೆಗೆ ಮೂರರಿಂದ ನಾಲ್ಕು ಸೆಂಟಿ ಮೀಟರಿನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಯಾರು ಕೂಡ ಮನೆಯಿಂದ ಹೊರಬರಬೇಡಿ ಎಂದು ಮುಂಬೈ ಪೊಲೀಸ್ ಜನರಲ್ಲಿ ಮನವಿ ಮಾಡಿದೆ.



ಮುಂಬೈ ಮಹಾನಗರದ ನರನಾಡಿಯಂತಿದ್ದ ರೈಲು ಯಾನವನ್ನು ರದ್ದು ಪಡಿಸಲಾಗಿದ್ದರೆ, ಬಸ್, ವಿಮಾನ ಸಂಚಾರವೂ ಸ್ತಬ್ಧವಾಗಿದೆ. ಮುಂಬೈ ಏರ್ಪೋರ್ಟ್ ನಲ್ಲಿ ನಿಲ್ಲಿಸಲಾಗಿದ್ದ ಮೂರು ಕ್ರೇನ್ ಗಳು ಬಿರುಗಾಳಿಗೆ ಉರುಳಿ ಬಿದ್ದಿದ್ದು ಸಾವು ನೋವಿನ ಬಗ್ಗೆ ತಿಳಿದುಬಂದಿಲ್ಲ. ಇನ್ನು ತಗ್ಗು ಪ್ರದೇಶಗಳೆಲ್ಲ ನೀರಿನಿಂದ ಆವೃತ ಆಗಿದ್ದು ಸಂತ್ರಸ್ತರ ರಕ್ಷಣೆಗೆ ಎನ್ ಡಿ ಆರ್ ಎಫ್ ಮುಂದಾಗಿದೆ.

ಇದೇ ವೇಳೆ, ಮುಂಬೈನ ಪರಿಸ್ಥಿತಿ ಬಗ್ಗೆ ತಿಳಿದುಕೊಳ್ಳಲು ಪ್ರಧಾನಿ ಮೋದಿ, ಸಿಎಂ ಉದ್ಧವ್ ಠಾಕ್ರೆಗೆ ಕರೆ ಮಾಡಿದ್ದಾರೆ. ರಕ್ಷಣಾ ಪಡೆ ಸನ್ನದ್ದ ಇರಿಸಲು ಸೂಚಿಸಿದ್ದು ಹೆಚ್ಚಿನ ನೆರವಿಗೆ ಸಿದ್ಧ ಇರುವುದಾಗಿ ಮೋದಿ ಹೇಳಿದ್ದಾರೆ.
ಮಹಾನಗರ ವ್ಯಾಪ್ತಿಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು ಹಲವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇದೇ ವೇಳೆ 35 ವರ್ಷದ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಹಿಡಿದು ರಸ್ತೆ ದಾಟುತ್ತಿದ್ದಾಗ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ರಾತ್ರಿ ವೇಳೆ ಬಿರುಗಾಳಿ ಮತ್ತು ಭಾರೀ ಮಳೆಯಾಗುವ ಕಾರಣ ಯಾರೂ ಮನೆಯಿಂದ ಹೊರಬರದಂತೆ ಸಚಿವ ಆದಿತ್ಯ ಠಾಕ್ರೆ ಮನವಿ ಮಾಡಿದ್ದಾರೆ. ವಿಶೇಷವಾಗಿ ಮಾಧ್ಯಮ ಮಂದಿಯೂ ತಮ್ಮ ಕ್ಷೇಮವನ್ನು ನೋಡಿಕೊಂಡು ಮುಂದುವರೆಯಿರಿ. ಅಪಾಯ ಇರುವ ಕಡೆ ತೆರಳದಿರಿ ಎಂದು ಟ್ವೀಟ್ ಮಾಡಿ ಕೇಳಿಕೊಂಡಿದ್ದಾರೆ. ಮುನ್ಸೂಚನೆ ಪ್ರಕಾರ, ಇಂದು ರಾತ್ರಿಯಿಂದ ಬೆಳಗ್ಗಿನ ವರೆಗೆ ಮುಂಬೈನ ಜನ ಕಂಡು ಕೇಳರಿಯದ ರೀತಿ ಮಳೆಯಾಗಲಿದೆ ಎನ್ನಲಾಗ್ತಿದೆ. ಸೋಮವಾರ ಬೆಳಗ್ಗಿನಿಂದ ದಿಢೀರ್ ಆಗಿ ಮಳೆ ಸುರಿಯತೊಡಗಿದ್ದು ಚಂಡಮಾರುತ ಅಪ್ಪಳಿಸಿದ ರೀತಿ ಮಳೆ ಗಾಳಿ ಮುಂಬೈಗೆ ಮುಂಬೈಯನ್ನೇ ತತ್ತರಿಸುವಂತೆ ಮಾಡಿದೆ.. ತುರ್ತು ಅಗತ್ಯಕ್ಕಾಗಿ ಎನ್ ಡಿಆರ್ ಎಫ್ ತಂಡಗಳನ್ನು ಆಸುಪಾಸಿನ ರಾಯಗಢ, ಸಾಂಗ್ಲಿ , ಸೋಲಾಪುರ ಹೀಗೆ ಅಲ್ಲಲ್ಲಿ ಹೆಚ್ಚುವರಿ ಆಗಿ ನಿಯೋಜನೆ ಮಾಡಲಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm