ಬ್ರೇಕಿಂಗ್ ನ್ಯೂಸ್
05-07-23 04:40 pm HK News Desk ದೇಶ - ವಿದೇಶ
ಕೋಹಿಮಾ ಜು 05: ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗುಡ್ಡಗಾಡು ರಾಜ್ಯವಾದ ನಾಗಾಲ್ಯಾಂಡ್ನಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಭೂ ಕುಸಿತವಾದ ವರದಿಗಳಾಗಿವೆ. ಆದರೆ ಮಂಗಳವಾರ ನಡೆದ ದುರಂತದಲ್ಲಿ ಬಂಡೆಗಳು ಕಾರಿನ ಮೇಲೆ ಉರುಳಿ ಇಬ್ಬರನ್ನು ಬಲಿ ಪಡೆದುಕೊಂಡಿವೆ.
ಇಲ್ಲಿನ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆಗಳು ಉರುಳಿ ಮೂರು ಕಾರುಗಳನ್ನು ಧ್ವಂಸಗೊಳಿಸಿವೆ. ಪೊಲೀಸ್ ಚೆಕ್ಪೋಸ್ಟ್ ಬಳಿಯ ಚುಮೌಕೆಡಿಮಾದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಗಾಯಗೊಂಡವರು ದಿಮಾಪುರದ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರ ಪರಿಸ್ಥಿತಿ ಗಂಭೀರವಾಗಿದೆ.
ಇನ್ನು ಈ ಘಟನೆಯ ಭಯಾನಕ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ಕೊಹಿಮಾದಿಂದ ಬರುತ್ತಿದ್ದ ವಾಹನಗಳು, ಪೊಲೀಸ್ ತಪಾಸಣೆ ಸ್ಥಳದಲ್ಲಿ ನಿಲ್ಲಿಸಿದ್ದಾಗ ಈ ದುರ್ಘಟನೆ ನಡೆದಿದೆ. ಬೆಟ್ಟದ ಮೇಲಿಂದ ಉರುಳಿ ಬರುವ ಬಂಡೆಗಳು ಕಾರನ್ನು ಧ್ವಂಸಗೊಳಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಒಂದು ಬಂಡೆ ಎರಡು ಕಾರುಗಳನ್ನು ಧ್ವಂಸಗೊಳಿಸಿದರೆ, ಅದರ ಮುಂದೆ ನಿಂತಿದ್ದ ಇನ್ನೊಂದು ಕಾರಿಗೆ ಮತ್ತೊಂದು ಬೃಹತ್ ಬಂಡೆ ಅಪ್ಪಳಿಸಿ ಕಾರು ಪಲ್ಟಿಯಾಗಿ ಪಕ್ಕದಲ್ಲಿ ನಿಂತಿದ್ದ ಟ್ರಕ್ಗೆ ಅಪ್ಪಳಿಸುತ್ತದೆ. ಅಪಘಾತದ ದೃಶ್ಯ ಅವರ ಹಿಂದೆ ಇದ್ದ ವಾಹನದ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Horrible video of landslide in Nagaland.!
— Dr. Jitendra Nagar (@NagarJitendra) July 4, 2023
😳😳😳 pic.twitter.com/EuwzpgANth
Massive boulders rolled down and smashed three cars on the Kohima-Dimapur National Highway during a landslide amid rain on Tuesday. The incident took place in Chumoukedima, near a police checkpost. At least two people were killed, and three others were injured in the incident.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm