ಬ್ರೇಕಿಂಗ್ ನ್ಯೂಸ್
06-07-23 01:23 pm HK News Desk ದೇಶ - ವಿದೇಶ
ಮೆಕ್ಸಿಕೋ, ಜುಲೈ 6: ಪ್ರಯಾಣಿಕರ ಬಸ್ಸೊಂದು ಪರ್ವತದ ರಸ್ತೆಯಿಂದ ಕೆಳಗೆ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. 17 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಂಕುಡೊಂಕಾದ ರಸ್ತೆಗಳು ಮತ್ತು ಕಡಿದಾದ ಕಂದರಗಳನ್ನು ಹೊಂದಿರುವ ಪರ್ವತ ಪ್ರದೇಶದಲ್ಲಿ ನೆಲೆಗೊಂಡಿರುವ ಪಟ್ಟಣವಾದ ಮ್ಯಾಗ್ಡಲೇನಾ ಪೆನಾಸ್ಕೋದಲ್ಲಿ ಅಪಘಾತ ಸಂಭವಿಸಿದೆ.
ಬಸ್ ಅಪಘಾತದಲ್ಲಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಓಕ್ಸಾಕಾ ರಾಜ್ಯ ಪ್ರಾಸಿಕ್ಯೂಟರ್ ಬರ್ನಾರ್ಡೊ ರೊಡ್ರಿಗಜ್ ಅಲಮಿಲ್ಲಾ ತಿಳಿಸಿದ್ದಾರೆ.
ಅಪಘಾತದ ಕಾರಣದ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ. ಯಾಂತ್ರಿಕ ವೈಫಲ್ಯ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ನಾಗರಿಕ ಸಂರಕ್ಷಣಾ ಸಂಸ್ಥೆ ಪ್ರಕಾರ, ಗಾಯಗೊಂಡವರಲ್ಲಿ ಕನಿಷ್ಠ ಆರು ಮಂದಿ ಪ್ರಜ್ಞಾಹೀನರಾಗಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪ್ರಾಸಿಕ್ಯೂಟರ್ ಬರ್ನಾರ್ಡೊ ರೊಡ್ರಿಗಜ್ ಅಲಮಿಲ್ಲಾ ಹೇಳಿದ್ದಾರೆ.
ಸ್ಥಳೀಯ ಸಾರಿಗೆ ಸಂಸ್ಥೆಯೊಂದು ನಿರ್ವಹಿಸುತ್ತಿದ್ದ ಬಸ್ ಮಂಗಳವಾರ ರಾತ್ರಿ ರಾಜಧಾನಿ ಮೆಕ್ಸಿಕೋ ನಗರದಿಂದ ಹೊರಟು ಸ್ಯಾಂಟಿಯಾಗೊ ಡಿ ಯೊಸೊಂಡುವಾ ಪಟ್ಟಣಕ್ಕೆ ತೆರಳುತ್ತಿತ್ತು. ವಾಹನ ಚಾಲಕನು ಪ್ರಾಯಶಃ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ದುರದೃಷ್ಟವಶಾತ್ ಬಸ್ 25 ಮೀಟರ್ (80 ಅಡಿ) ಆಳದ ಕಂದಕಕ್ಕೆ ಬಿದ್ದಿದೆ' ಎಂದು ರಾಜ್ಯ ಅಧಿಕಾರಿ ಜೀಸಸ್ ರೊಮೆರೊ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಮಗ್ಡಲೇನಾ ಪೆನಾಸ್ಕೋದಲ್ಲಿ ಸಂಭವಿಸಿದ ಅಪಘಾತಕ್ಕೆ ನಾವು ತೀವ್ರವಾಗಿ ವಿಷಾದಿಸುತ್ತೇವೆ ಎಂದು ಓಕ್ಸಾಕಾ ರಾಜ್ಯ ಗವರ್ನರ್ ಸಾಲೋಮನ್ ಹೇ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
'ನಮ್ಮ ಸರ್ಕಾರಿ ಸಿಬ್ಬಂದಿ ಈಗಾಗಲೇ ರಕ್ಷಣಾ ಕಾರ್ಯಾಚರಣೆ ಕಾರ್ಯನಿರ್ವಹಿಸುತ್ತಿದ್ದಾರೆ. ಗಾಯಗೊಂಡ ಜನರಿಗೆ ಎಲ್ಲಾ ಬೆಂಬಲವನ್ನು ಒದಗಿಸುತ್ತಿದ್ದಾರೆ' ಎಂದು ಅವರು ಹೇಳಿದರು.
At least 27 people were killed in Mexico when a passenger bus careened off a mountain road and plummeted into a ravine Wednesday in the southern state of Oaxaca, police said. Images from the scene showed the mangled wreckage of the vehicle lying on its side at the bottom of a steep cliff as rescuers worked nearby.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm