ಬ್ರೇಕಿಂಗ್ ನ್ಯೂಸ್
06-07-23 01:23 pm HK News Desk ದೇಶ - ವಿದೇಶ
ಮೆಕ್ಸಿಕೋ, ಜುಲೈ 6: ಪ್ರಯಾಣಿಕರ ಬಸ್ಸೊಂದು ಪರ್ವತದ ರಸ್ತೆಯಿಂದ ಕೆಳಗೆ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. 17 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಂಕುಡೊಂಕಾದ ರಸ್ತೆಗಳು ಮತ್ತು ಕಡಿದಾದ ಕಂದರಗಳನ್ನು ಹೊಂದಿರುವ ಪರ್ವತ ಪ್ರದೇಶದಲ್ಲಿ ನೆಲೆಗೊಂಡಿರುವ ಪಟ್ಟಣವಾದ ಮ್ಯಾಗ್ಡಲೇನಾ ಪೆನಾಸ್ಕೋದಲ್ಲಿ ಅಪಘಾತ ಸಂಭವಿಸಿದೆ.
ಬಸ್ ಅಪಘಾತದಲ್ಲಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಓಕ್ಸಾಕಾ ರಾಜ್ಯ ಪ್ರಾಸಿಕ್ಯೂಟರ್ ಬರ್ನಾರ್ಡೊ ರೊಡ್ರಿಗಜ್ ಅಲಮಿಲ್ಲಾ ತಿಳಿಸಿದ್ದಾರೆ.



ಅಪಘಾತದ ಕಾರಣದ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ. ಯಾಂತ್ರಿಕ ವೈಫಲ್ಯ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ನಾಗರಿಕ ಸಂರಕ್ಷಣಾ ಸಂಸ್ಥೆ ಪ್ರಕಾರ, ಗಾಯಗೊಂಡವರಲ್ಲಿ ಕನಿಷ್ಠ ಆರು ಮಂದಿ ಪ್ರಜ್ಞಾಹೀನರಾಗಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪ್ರಾಸಿಕ್ಯೂಟರ್ ಬರ್ನಾರ್ಡೊ ರೊಡ್ರಿಗಜ್ ಅಲಮಿಲ್ಲಾ ಹೇಳಿದ್ದಾರೆ.
ಸ್ಥಳೀಯ ಸಾರಿಗೆ ಸಂಸ್ಥೆಯೊಂದು ನಿರ್ವಹಿಸುತ್ತಿದ್ದ ಬಸ್ ಮಂಗಳವಾರ ರಾತ್ರಿ ರಾಜಧಾನಿ ಮೆಕ್ಸಿಕೋ ನಗರದಿಂದ ಹೊರಟು ಸ್ಯಾಂಟಿಯಾಗೊ ಡಿ ಯೊಸೊಂಡುವಾ ಪಟ್ಟಣಕ್ಕೆ ತೆರಳುತ್ತಿತ್ತು. ವಾಹನ ಚಾಲಕನು ಪ್ರಾಯಶಃ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ದುರದೃಷ್ಟವಶಾತ್ ಬಸ್ 25 ಮೀಟರ್ (80 ಅಡಿ) ಆಳದ ಕಂದಕಕ್ಕೆ ಬಿದ್ದಿದೆ' ಎಂದು ರಾಜ್ಯ ಅಧಿಕಾರಿ ಜೀಸಸ್ ರೊಮೆರೊ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮಗ್ಡಲೇನಾ ಪೆನಾಸ್ಕೋದಲ್ಲಿ ಸಂಭವಿಸಿದ ಅಪಘಾತಕ್ಕೆ ನಾವು ತೀವ್ರವಾಗಿ ವಿಷಾದಿಸುತ್ತೇವೆ ಎಂದು ಓಕ್ಸಾಕಾ ರಾಜ್ಯ ಗವರ್ನರ್ ಸಾಲೋಮನ್ ಹೇ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
'ನಮ್ಮ ಸರ್ಕಾರಿ ಸಿಬ್ಬಂದಿ ಈಗಾಗಲೇ ರಕ್ಷಣಾ ಕಾರ್ಯಾಚರಣೆ ಕಾರ್ಯನಿರ್ವಹಿಸುತ್ತಿದ್ದಾರೆ. ಗಾಯಗೊಂಡ ಜನರಿಗೆ ಎಲ್ಲಾ ಬೆಂಬಲವನ್ನು ಒದಗಿಸುತ್ತಿದ್ದಾರೆ' ಎಂದು ಅವರು ಹೇಳಿದರು.
At least 27 people were killed in Mexico when a passenger bus careened off a mountain road and plummeted into a ravine Wednesday in the southern state of Oaxaca, police said. Images from the scene showed the mangled wreckage of the vehicle lying on its side at the bottom of a steep cliff as rescuers worked nearby.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm