ಬ್ರೇಕಿಂಗ್ ನ್ಯೂಸ್
06-07-23 01:23 pm HK News Desk ದೇಶ - ವಿದೇಶ
ಮೆಕ್ಸಿಕೋ, ಜುಲೈ 6: ಪ್ರಯಾಣಿಕರ ಬಸ್ಸೊಂದು ಪರ್ವತದ ರಸ್ತೆಯಿಂದ ಕೆಳಗೆ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. 17 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಂಕುಡೊಂಕಾದ ರಸ್ತೆಗಳು ಮತ್ತು ಕಡಿದಾದ ಕಂದರಗಳನ್ನು ಹೊಂದಿರುವ ಪರ್ವತ ಪ್ರದೇಶದಲ್ಲಿ ನೆಲೆಗೊಂಡಿರುವ ಪಟ್ಟಣವಾದ ಮ್ಯಾಗ್ಡಲೇನಾ ಪೆನಾಸ್ಕೋದಲ್ಲಿ ಅಪಘಾತ ಸಂಭವಿಸಿದೆ.
ಬಸ್ ಅಪಘಾತದಲ್ಲಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಓಕ್ಸಾಕಾ ರಾಜ್ಯ ಪ್ರಾಸಿಕ್ಯೂಟರ್ ಬರ್ನಾರ್ಡೊ ರೊಡ್ರಿಗಜ್ ಅಲಮಿಲ್ಲಾ ತಿಳಿಸಿದ್ದಾರೆ.



ಅಪಘಾತದ ಕಾರಣದ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ. ಯಾಂತ್ರಿಕ ವೈಫಲ್ಯ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ನಾಗರಿಕ ಸಂರಕ್ಷಣಾ ಸಂಸ್ಥೆ ಪ್ರಕಾರ, ಗಾಯಗೊಂಡವರಲ್ಲಿ ಕನಿಷ್ಠ ಆರು ಮಂದಿ ಪ್ರಜ್ಞಾಹೀನರಾಗಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪ್ರಾಸಿಕ್ಯೂಟರ್ ಬರ್ನಾರ್ಡೊ ರೊಡ್ರಿಗಜ್ ಅಲಮಿಲ್ಲಾ ಹೇಳಿದ್ದಾರೆ.
ಸ್ಥಳೀಯ ಸಾರಿಗೆ ಸಂಸ್ಥೆಯೊಂದು ನಿರ್ವಹಿಸುತ್ತಿದ್ದ ಬಸ್ ಮಂಗಳವಾರ ರಾತ್ರಿ ರಾಜಧಾನಿ ಮೆಕ್ಸಿಕೋ ನಗರದಿಂದ ಹೊರಟು ಸ್ಯಾಂಟಿಯಾಗೊ ಡಿ ಯೊಸೊಂಡುವಾ ಪಟ್ಟಣಕ್ಕೆ ತೆರಳುತ್ತಿತ್ತು. ವಾಹನ ಚಾಲಕನು ಪ್ರಾಯಶಃ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ದುರದೃಷ್ಟವಶಾತ್ ಬಸ್ 25 ಮೀಟರ್ (80 ಅಡಿ) ಆಳದ ಕಂದಕಕ್ಕೆ ಬಿದ್ದಿದೆ' ಎಂದು ರಾಜ್ಯ ಅಧಿಕಾರಿ ಜೀಸಸ್ ರೊಮೆರೊ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮಗ್ಡಲೇನಾ ಪೆನಾಸ್ಕೋದಲ್ಲಿ ಸಂಭವಿಸಿದ ಅಪಘಾತಕ್ಕೆ ನಾವು ತೀವ್ರವಾಗಿ ವಿಷಾದಿಸುತ್ತೇವೆ ಎಂದು ಓಕ್ಸಾಕಾ ರಾಜ್ಯ ಗವರ್ನರ್ ಸಾಲೋಮನ್ ಹೇ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
'ನಮ್ಮ ಸರ್ಕಾರಿ ಸಿಬ್ಬಂದಿ ಈಗಾಗಲೇ ರಕ್ಷಣಾ ಕಾರ್ಯಾಚರಣೆ ಕಾರ್ಯನಿರ್ವಹಿಸುತ್ತಿದ್ದಾರೆ. ಗಾಯಗೊಂಡ ಜನರಿಗೆ ಎಲ್ಲಾ ಬೆಂಬಲವನ್ನು ಒದಗಿಸುತ್ತಿದ್ದಾರೆ' ಎಂದು ಅವರು ಹೇಳಿದರು.
At least 27 people were killed in Mexico when a passenger bus careened off a mountain road and plummeted into a ravine Wednesday in the southern state of Oaxaca, police said. Images from the scene showed the mangled wreckage of the vehicle lying on its side at the bottom of a steep cliff as rescuers worked nearby.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm