ಬ್ರೇಕಿಂಗ್ ನ್ಯೂಸ್
08-07-23 01:20 pm HK News Desk ದೇಶ - ವಿದೇಶ
ಜೋಧಪುರ್, ಜುಲೈ 8: ಪತಿಯ ಅಕ್ರಮ ಸಂಬಂಧದ ವಿಚಾರವನ್ನು ಕಣ್ಣಾರೆ ಕಂಡು ಮನನೊಂದ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ಸರಕು ಸಾಗಣೆ ರೈಲಿನ ಮುಂಭಾಗಕ್ಕೆ ಹಾರಿದ ಪರಿಣಾಮ ಮೂವರು ದಾರುಣವಾಗಿ ಕೊನೆಯುಸಿರೆಳೆದಿರುವ ಘಟನೆ ರಾಜಸ್ಥಾನದ ಜೋಧ್ ಪುರದಲ್ಲಿ ನಡೆದಿದೆ.
ತಾಯಿ ಮನೆಯಲ್ಲಿ ವಾಸವಾಗಿದ್ದ ಮಹಿಳೆ, ತನ್ನಿಬ್ಬರು ಮಕ್ಕಳೊಂದಿಗೆ ಪತಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಜೋಧ್ ಪುರಕ್ಕೆ ಆಗಮಿಸಿದ್ದಳು. ಪತಿಯ ಮನೆಯನ್ನು ತಲುಪಿದ ಪತ್ನಿಗೆ ಆಘಾತವಾಗಿತ್ತು. ಅದಕ್ಕೆ ಕಾರಣ ಪತಿ ಮತ್ತೊಬ್ಬ ಯುವತಿ ಜತೆ ಇದ್ದಿರುವುದು.
ಮನೆಯೊಳಗೆ ಹೋದ ಪತ್ನಿಗೆ ಪತಿ ಮತ್ತೊಬ್ಬ ಯುವತಿ ಜತೆ ರಾಸಲೀಲೆಯಲ್ಲಿ ತೊಡಗಿರುವುದನ್ನು ಕಣ್ಣಾರೆ ಕಂಡು ರೋಸಿ ಹೋಗಿದ್ದಳು. ಆಕೆ ಕೂಡಲೇ ಮೊಬೈಲ್ ನಲ್ಲಿ ಪತಿಯ ಅನೈತಿಕ ಚಟುವಟಿಕೆಯ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಅತ್ತೆಗೆ ಕಳುಹಿಸಿಕೊಟ್ಟಿದ್ದಾಳೆ.

ಪತಿಯ ತವರು ಮನೆಯಲ್ಲಿದ್ದ ಪತ್ನಿ ಹಲವು ಬಾರಿ ಪತಿಗೆ ಕರೆ ಮಾಡಿದ್ದರು ಕೂಡಾ ಆತ ಕಾಲ್ ರಿಸೀವ್ ಮಾಡುತ್ತಿರಲಿಲ್ಲ. ನಂತರ ಪತಿಯ ಹುಟ್ಟುಹಬ್ಬದ ದಿನದಂದು ಖುದ್ದಾಗಿ ಮಕ್ಕಳ ಜೊತೆ ಪತಿಯನ್ನು ಭೇಟಿಯಾಗಲು ನಿರ್ಧರಿಸಿದ್ದಳು. ಆ ನಿಟ್ಟಿನಲ್ಲಿ ಜೋಧ್ ಪುರದಲ್ಲಿ ಪತಿಯ ನಿವಾಸಕ್ಕೆ ಬಂದ ವೇಳೆ ಆತ ಮತ್ತೊಬ್ಬಳು ಯುವತಿಯೊಂದಿಗೆ ವಾಸವಾಗಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಳು.
ಪತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡ ಘಟನೆ ನಂತರ ಆಕ್ರೋಶಗೊಂಡ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣಕ್ಕೆ ಬಂದು ಸರಕು ಸಾಗಣೆ ರೈಲಿನ ಮುಂಭಾಗದಲ್ಲಿ ಹಾರಿಬಿಟ್ಟಿದ್ದಳು. ಕೂಡಲೇ ಗೂಡ್ಸ್ ರೈಲನ್ನು ನಿಲ್ಲಿಸಲಾಗಿತ್ತು. ಆದರೆ ಮಹಿಳೆ ಮತ್ತು ಇಬ್ಬರು ಮಕ್ಕಳ ದೇಹ ಛಿದ್ರ, ಛಿದ್ರವಾಗಿ ಹೋಗಿತ್ತು. ಶವದ ತುಂಡುಗಳನ್ನು ಒಟ್ಟುಗೂಡಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮೋಸಗಾರನ ಪತ್ತೆ ಹಚ್ಚುತ್ತಿದ್ದಾರೆ.
Wife ends her life by jumping under the train with her two children after seeing her husband with another woman on his birthday. This heartbreaking incident in Rajasthan’s Jodhpur brought tears to everyone’s eyes. A video of the incident is also going viral, in which the deceased woman is seen fighting with her husband’s girlfriend. Suresh Vishnoi of Mathania area of Jodhpur district lived in a rented room in Jodhpur’s Ratanada area. A wrong step by Suresh, a taxi driver by profession, leaves the family in shambles.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm