ಬ್ರೇಕಿಂಗ್ ನ್ಯೂಸ್
11-07-23 01:17 pm HK News Desk ದೇಶ - ವಿದೇಶ
ಲಕ್ನೋ, ಜುಲೈ 11: ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಇಂದು ಶಾಲಾ ಬಸ್ - ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಕಾರಿಗೆ ಶಾಲಾ ಬಸ್ ಮುಖಾಮುಖಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಆರು ಜನರು ಕಾರಿನಲ್ಲಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ಚುವರಿ ಡಿಸಿಪಿ (ಟ್ರಾಫಿಕ್) ರಮಾನಂದ್ ಕುಶ್ವಾಹ ಅವರು, ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಶಾಲಾ ಬಸ್ಗೆ ಕಾರು ಡಿಕ್ಕಿ ಹೊಡೆದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಚಾಲಕ ದೆಹಲಿಯ ಗಾಜಿಪುರದಿಂದ ಸಿಎನ್ಜಿ ಪಡೆದು ತಪ್ಪು ದಿಕ್ಕಿನಿಂದ ಬರುತ್ತಿದ್ದ . ಕಾರು ಮೀರತ್ನಿಂದ ಗುರ್ಗಾಂವ್ಗೆ ಹೋಗುತ್ತಿತ್ತು ಆಗ ಈ ಭೀಕರ ಅಪಘಾತ ಸಂಭವಿಸಿದೆ. ಬಸ್ನಲ್ಲಿ ಯಾವುದೇ ವಿದ್ಯಾರ್ಥಿ ಇರಲಿಲ್ಲ' ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಸ್ತೆ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪವನ್ನೂ ವ್ಯಕ್ತಪಡಿಸಿದ್ದಾರೆ. ' ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ' ಎಂದು ಸಿಎಂ ಕಚೇರಿ ಟ್ವಿಟರ್ ನಲ್ಲಿ ಬರೆದುಕೊಂಡಿದೆ.
CCTV footage of the SUV-bus accident on Delhi-Meerut Expressway in Ghaziabad. pic.twitter.com/ZeIilkh3cQ
— Press Trust of India (@PTI_News) July 11, 2023
Six people were killed and two others critically injured after a school bus driving on the wrong side of the road rammed into an SUV on the Delhi-Meerut Expressway near Crossing Republik in Ghaziabad on Tuesday, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm