ಬ್ರೇಕಿಂಗ್ ನ್ಯೂಸ್
03-11-20 06:11 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 03: ಉಳಿತಾಯ ಮತ್ತು ಚಾಲ್ತಿ ಖಾತೆಗಳಿಂದ ಹಣ ವರ್ಗಾವಣೆ ಮತ್ತು ನಗದು ಡ್ರಾ ಮಾಡುವುದಕ್ಕೆ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೇಂದ್ರ ಹಣಕಾಸು ಇಲಾಖೆ ದಿಢೀರ್ ಆಗಿ ಹಿಂಪಡೆದಿದೆ.
ಬರೋಡಾ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕುಗಳು ಸದ್ದಿಲ್ಲದೆ ಹೆಚ್ಚುವರಿ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದವು. ಆದರೆ, ಕೊರೊನಾ ಸಂದರ್ಭದಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಿ, ಸಾರ್ವಜನಿಕ ವಲಯದ ಯಾವುದೇ ಬ್ಯಾಂಕುಗಳಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದೆ.
ಬರೋಡಾ ಬ್ಯಾಂಕ್ ನವೆಂಬರ್ 1ರಿಂದಲೇ ಈ ನಿಯಮ ಅನ್ವಯಿಸಲು ಸುತ್ತೋಲೆ ನೀಡಿತ್ತು. ಐದು ಬಾರಿಯ ಉಚಿತ ವರ್ಗಾವಣೆಯನ್ನು ಮೂರು ಬಾರಿಗೆ ಕಡಿತಗೊಳಿಸಿದ್ದಲ್ಲದೆ, ಹೆಚ್ಚುವರಿಯಾಗಿ ಮಾಡುವ ಪ್ರತಿ ವರ್ಗಾವಣೆ ಮತ್ತು ನಗದು ವಿತ್ ಡ್ರಾಗಳಿಗೆ ತಲಾ 150 ರೂ.ನಂತೆ ಶುಲ್ಕ ವಿಧಿಸುವುದಾಗಿ ಹೇಳಲಾಗಿತ್ತು. ಇದೇ ನೀತಿಯನ್ನು ಸಾರ್ವಜನಿಕ ರಂಗದ ಎಲ್ಲ ಬ್ಯಾಂಕುಗಳು ಅನ್ವಯಿಸಲು ಸಿದ್ಧತೆ ನಡೆಸಿದ್ದವು. ಡಿಜಿಟಲ್ ಉತ್ತೇಜನ ನೆಪದಲ್ಲಿ ಗ್ರಾಹಕರಿಗೆ ಹೊರೆ ವಿಧಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರು ಮತ್ತು ಪ್ರತಿಪಕ್ಷಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕೇಂದ್ರ ಸರಕಾರ ದಿಢೀರ್ ಆಗಿ ಪ್ರಸ್ತಾಪವನ್ನು ಹಿಂದಕ್ಕೆ ಪಡೆದಿದೆ.
ಇದಲ್ಲದೆ, ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ಜನಧನ್ ಖಾತೆಯ 41 ಕೋಟಿ ಗ್ರಾಹಕರು ಸೇರಿದಂತೆ 60 ಕೋಟಿಗೂ ಹೆಚ್ಚು ಇರುವ ಸೇವಿಂಗ್ಸ್ ಖಾತೆಗಳಿಂದ ಹಣ ವರ್ಗಾವಣೆಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm