ಬ್ರೇಕಿಂಗ್ ನ್ಯೂಸ್
03-11-20 06:11 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 03: ಉಳಿತಾಯ ಮತ್ತು ಚಾಲ್ತಿ ಖಾತೆಗಳಿಂದ ಹಣ ವರ್ಗಾವಣೆ ಮತ್ತು ನಗದು ಡ್ರಾ ಮಾಡುವುದಕ್ಕೆ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೇಂದ್ರ ಹಣಕಾಸು ಇಲಾಖೆ ದಿಢೀರ್ ಆಗಿ ಹಿಂಪಡೆದಿದೆ.
ಬರೋಡಾ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕುಗಳು ಸದ್ದಿಲ್ಲದೆ ಹೆಚ್ಚುವರಿ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದವು. ಆದರೆ, ಕೊರೊನಾ ಸಂದರ್ಭದಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಿ, ಸಾರ್ವಜನಿಕ ವಲಯದ ಯಾವುದೇ ಬ್ಯಾಂಕುಗಳಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದೆ.


ಬರೋಡಾ ಬ್ಯಾಂಕ್ ನವೆಂಬರ್ 1ರಿಂದಲೇ ಈ ನಿಯಮ ಅನ್ವಯಿಸಲು ಸುತ್ತೋಲೆ ನೀಡಿತ್ತು. ಐದು ಬಾರಿಯ ಉಚಿತ ವರ್ಗಾವಣೆಯನ್ನು ಮೂರು ಬಾರಿಗೆ ಕಡಿತಗೊಳಿಸಿದ್ದಲ್ಲದೆ, ಹೆಚ್ಚುವರಿಯಾಗಿ ಮಾಡುವ ಪ್ರತಿ ವರ್ಗಾವಣೆ ಮತ್ತು ನಗದು ವಿತ್ ಡ್ರಾಗಳಿಗೆ ತಲಾ 150 ರೂ.ನಂತೆ ಶುಲ್ಕ ವಿಧಿಸುವುದಾಗಿ ಹೇಳಲಾಗಿತ್ತು. ಇದೇ ನೀತಿಯನ್ನು ಸಾರ್ವಜನಿಕ ರಂಗದ ಎಲ್ಲ ಬ್ಯಾಂಕುಗಳು ಅನ್ವಯಿಸಲು ಸಿದ್ಧತೆ ನಡೆಸಿದ್ದವು. ಡಿಜಿಟಲ್ ಉತ್ತೇಜನ ನೆಪದಲ್ಲಿ ಗ್ರಾಹಕರಿಗೆ ಹೊರೆ ವಿಧಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರು ಮತ್ತು ಪ್ರತಿಪಕ್ಷಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕೇಂದ್ರ ಸರಕಾರ ದಿಢೀರ್ ಆಗಿ ಪ್ರಸ್ತಾಪವನ್ನು ಹಿಂದಕ್ಕೆ ಪಡೆದಿದೆ.
ಇದಲ್ಲದೆ, ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ಜನಧನ್ ಖಾತೆಯ 41 ಕೋಟಿ ಗ್ರಾಹಕರು ಸೇರಿದಂತೆ 60 ಕೋಟಿಗೂ ಹೆಚ್ಚು ಇರುವ ಸೇವಿಂಗ್ಸ್ ಖಾತೆಗಳಿಂದ ಹಣ ವರ್ಗಾವಣೆಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm