ಬ್ರೇಕಿಂಗ್ ನ್ಯೂಸ್
30-07-20 03:36 pm Special Correspondant ದೇಶ - ವಿದೇಶ
ನವದೆಹಲಿ, ಜುಲೈ 30: ಯುವರಾಜ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಲು ಪಕ್ಷದ ಸಂಸದರಿಂದಲೇ ಒತ್ತಡ ಕೇಳಿಬಂದಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಮ್ಮಿಕೊಂಡ ವರ್ಚುವಲ್ ಮೀಟ್ ನಲ್ಲಿ ಪಕ್ಷದ ಸಂಸದರು ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷ ಹುದ್ದೆಗೆ ಏರಬೇಕು ಎಂದು ಒತ್ತಾಯಿಸಿದ ಬೆಳವಣಿಗೆ ನಡೆದಿದೆ.
ದೇಶದ ಸದ್ಯದ ರಾಜಕೀಯ ಬೆಳವಣಿಗೆ ಮತ್ತು ಹೆಚ್ಚುತ್ತಿರುವ ಕೊರೊನಾ ಸೋಂಕಿನ ವಿಚಾರದಲ್ಲಿ ಸೋನಿಯಾ ಗಾಧಿ ಪಕ್ಷದ ಸಂಸದರು ಮತ್ತು ಪ್ರಮುಖರ ಜೊತೆ ವರ್ಚುವಲ್ ಮೀಟ್ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ರಾಜ್ಯಸಭಾ ಸದಸ್ಯರೂ ಆಗಿರುವ ಪಕ್ಷದ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್, ರಾಹುಲ್ ಗಾಂಧಿ ಮತ್ತೆ ಪಕ್ಷದ ಅಧ್ಯಕ್ಷ ಹುದ್ದೆಗೇರುವಂತೆ ಒತ್ತಾಯ ಮಂಡಿಸಿದ್ದಾರೆ. ದಿಗ್ವಿಜಯ್ ಸಿಂಗ್ ಮಾತಿಗೆ ಇತರೇ ಸಂಸದರೂ ದನಿಗೂಡಿಸಿದ್ದಾರೆ. ರಾಜೀವ್ ಸಾತವ್, ಶಕ್ತಿಸಿನ್ಹ ಗೋಹಿಲ್, ನೀರಜ್ ಡಾಂಗೆ ಸೇರಿದಂತೆ ಹಲವು ಸಂಸದರು ರಾಹುಲ್ ಮತ್ತೆ ಪದವಿಗೇರುವಂತೆ ಒತ್ತಾಯಿಸಿದ್ದಾರೆ.
ರಾಜ್ಯಸಭಾ ಸದಸ್ಯ ವೇಣುಗೋಪಾಲ್ ಕೂಡ ಇದೇ ರೀತಿಯ ಒತ್ತಾಯ ಮಾಡಿದ್ದು, ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಜನರ ಅಭಿಪ್ರಾಯವನ್ನು ಎತ್ತಿಹಿಡಿದಿದೆ. ಆದರೆ ರಾಹುಲ್ ಮತ್ತೆ ಅಧ್ಯಕ್ಷರಾಗಬೇಕು ಎನ್ನುವ ನೆಲೆಯಲ್ಲಿ ಪಕ್ಷದ ಸಂಸದರಿಂದ ಆಗ್ರಹ ಕೇಳಿಬಂದಿದೆ. ಜುಲೈ 11ರಂದು ರಾಹುಲ್ ಗಾಂಧಿ ಎದುರಲ್ಲಿಯೇ ಲೋಕಸಭಾ ಸದಸ್ಯರಾದ ಮಾಣಿಕ್ಕಂ ಠಾಗೋರ್, ಗೌರವ್ ಗೊಗೋಯಿ ಮತ್ತಿತರರ ಸಂಸದರೂ ಇದೇ ರೀತಿಯ ಒತ್ತಾಯ ಮಾಡಿದ್ದರು. ರಾಹುಲ್ ಮಾತ್ರ ಈ ವಿಚಾರದಲ್ಲಿ ಮೌನವಾಗೇ ಇದ್ದರು ಎಂದು ಸಭೆಯಲ್ಲಿ ಸೋನಿಯಾ ಗಾಂಧಿ ಗಮನಕ್ಕೆ ತಂದಿದ್ದಾರೆ.
ಅಂದಹಾಗೆ, ಇದೇ ಆಗಸ್ಟ್ 10ಕ್ಕೆ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಲಿದ್ದಾರೆ. ಇದಕ್ಕೂ ಮುನ್ನ ಸೋನಿಯಾ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆಯೇ ಅಥವಾ ಬೇರೊಬ್ಬರನ್ನು ಆಯ್ಕೆ ಮಾಡಲಿದ್ದಾರೆಯೇ ಎನ್ನುವುದು ಖಚಿತವಾಗಲಿದೆ. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷರಾಗಬೇಕೆಂದು ಒತ್ತಾಯ ಕೇಳಿಬಂದಿದ್ದು ಮತ್ತೆ ಯುವರಾಜ ಪಟ್ಟ ಅಲಂಕರಿಸಲಿದ್ದಾರೆಯೇ ಎನ್ನುವ ಕುತೂಹಲ ಉಂಟಾಗಿದೆ. 2019ರ ಲೋಕಸಭೆ ಚುನಾವಣೆ ಸೋಲಿನ ನಂತರ ರಾಹುಲ್ ಪಕ್ಷಾಧ್ಯಕ್ಷ ಹುದ್ದೆ ತ್ಯಜಿಸಿದ್ದರು.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm