ಬ್ರೇಕಿಂಗ್ ನ್ಯೂಸ್
30-07-20 03:36 pm Special Correspondant ದೇಶ - ವಿದೇಶ
ನವದೆಹಲಿ, ಜುಲೈ 30: ಯುವರಾಜ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಲು ಪಕ್ಷದ ಸಂಸದರಿಂದಲೇ ಒತ್ತಡ ಕೇಳಿಬಂದಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಮ್ಮಿಕೊಂಡ ವರ್ಚುವಲ್ ಮೀಟ್ ನಲ್ಲಿ ಪಕ್ಷದ ಸಂಸದರು ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷ ಹುದ್ದೆಗೆ ಏರಬೇಕು ಎಂದು ಒತ್ತಾಯಿಸಿದ ಬೆಳವಣಿಗೆ ನಡೆದಿದೆ.
ದೇಶದ ಸದ್ಯದ ರಾಜಕೀಯ ಬೆಳವಣಿಗೆ ಮತ್ತು ಹೆಚ್ಚುತ್ತಿರುವ ಕೊರೊನಾ ಸೋಂಕಿನ ವಿಚಾರದಲ್ಲಿ ಸೋನಿಯಾ ಗಾಧಿ ಪಕ್ಷದ ಸಂಸದರು ಮತ್ತು ಪ್ರಮುಖರ ಜೊತೆ ವರ್ಚುವಲ್ ಮೀಟ್ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ರಾಜ್ಯಸಭಾ ಸದಸ್ಯರೂ ಆಗಿರುವ ಪಕ್ಷದ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್, ರಾಹುಲ್ ಗಾಂಧಿ ಮತ್ತೆ ಪಕ್ಷದ ಅಧ್ಯಕ್ಷ ಹುದ್ದೆಗೇರುವಂತೆ ಒತ್ತಾಯ ಮಂಡಿಸಿದ್ದಾರೆ. ದಿಗ್ವಿಜಯ್ ಸಿಂಗ್ ಮಾತಿಗೆ ಇತರೇ ಸಂಸದರೂ ದನಿಗೂಡಿಸಿದ್ದಾರೆ. ರಾಜೀವ್ ಸಾತವ್, ಶಕ್ತಿಸಿನ್ಹ ಗೋಹಿಲ್, ನೀರಜ್ ಡಾಂಗೆ ಸೇರಿದಂತೆ ಹಲವು ಸಂಸದರು ರಾಹುಲ್ ಮತ್ತೆ ಪದವಿಗೇರುವಂತೆ ಒತ್ತಾಯಿಸಿದ್ದಾರೆ.
ರಾಜ್ಯಸಭಾ ಸದಸ್ಯ ವೇಣುಗೋಪಾಲ್ ಕೂಡ ಇದೇ ರೀತಿಯ ಒತ್ತಾಯ ಮಾಡಿದ್ದು, ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಜನರ ಅಭಿಪ್ರಾಯವನ್ನು ಎತ್ತಿಹಿಡಿದಿದೆ. ಆದರೆ ರಾಹುಲ್ ಮತ್ತೆ ಅಧ್ಯಕ್ಷರಾಗಬೇಕು ಎನ್ನುವ ನೆಲೆಯಲ್ಲಿ ಪಕ್ಷದ ಸಂಸದರಿಂದ ಆಗ್ರಹ ಕೇಳಿಬಂದಿದೆ. ಜುಲೈ 11ರಂದು ರಾಹುಲ್ ಗಾಂಧಿ ಎದುರಲ್ಲಿಯೇ ಲೋಕಸಭಾ ಸದಸ್ಯರಾದ ಮಾಣಿಕ್ಕಂ ಠಾಗೋರ್, ಗೌರವ್ ಗೊಗೋಯಿ ಮತ್ತಿತರರ ಸಂಸದರೂ ಇದೇ ರೀತಿಯ ಒತ್ತಾಯ ಮಾಡಿದ್ದರು. ರಾಹುಲ್ ಮಾತ್ರ ಈ ವಿಚಾರದಲ್ಲಿ ಮೌನವಾಗೇ ಇದ್ದರು ಎಂದು ಸಭೆಯಲ್ಲಿ ಸೋನಿಯಾ ಗಾಂಧಿ ಗಮನಕ್ಕೆ ತಂದಿದ್ದಾರೆ.
ಅಂದಹಾಗೆ, ಇದೇ ಆಗಸ್ಟ್ 10ಕ್ಕೆ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಲಿದ್ದಾರೆ. ಇದಕ್ಕೂ ಮುನ್ನ ಸೋನಿಯಾ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆಯೇ ಅಥವಾ ಬೇರೊಬ್ಬರನ್ನು ಆಯ್ಕೆ ಮಾಡಲಿದ್ದಾರೆಯೇ ಎನ್ನುವುದು ಖಚಿತವಾಗಲಿದೆ. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷರಾಗಬೇಕೆಂದು ಒತ್ತಾಯ ಕೇಳಿಬಂದಿದ್ದು ಮತ್ತೆ ಯುವರಾಜ ಪಟ್ಟ ಅಲಂಕರಿಸಲಿದ್ದಾರೆಯೇ ಎನ್ನುವ ಕುತೂಹಲ ಉಂಟಾಗಿದೆ. 2019ರ ಲೋಕಸಭೆ ಚುನಾವಣೆ ಸೋಲಿನ ನಂತರ ರಾಹುಲ್ ಪಕ್ಷಾಧ್ಯಕ್ಷ ಹುದ್ದೆ ತ್ಯಜಿಸಿದ್ದರು.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm