ಬ್ರೇಕಿಂಗ್ ನ್ಯೂಸ್
06-08-20 04:18 am Headline Karnataka News Network ದೇಶ - ವಿದೇಶ
ಅಹ್ಮದಾಬಾದ್(ಆ. 06): ಅಹ್ಮದಾಬಾದ್ನ ಕೋವಿಡ್-19 ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಐಸಿಯು ವಾರ್ಡ್ನಲ್ಲಿದ್ದ ಎಂಟು ಮಂದಿ ರೋಗಿಗಳು ಬಲಿಯಾಗಿದ್ದಾರೆ. ಅಹ್ಮದಾಬಾದ್ನ ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಈ ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವೆನ್ನಲಾಗಿದೆ.
ಸಾವನ್ನಪ್ಪಿದ ಎಂಟು ಮಂದಿ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ. ಈ ದುರಂತ ಸಂಭವಿಸಿದಾಗ ಈ ಆಸ್ಪತ್ರೆಯಲ್ಲಿ 35 ರೋಗಿಗಳಿದ್ದರೆನ್ನಲಾಗಿದೆ. ಉಳಿದ ರೋಗಿಗಳು, ವೈದ್ಯರು ಮತ್ತು ಸಿಬ್ಬಂದಿಗೆ ಹಾನಿಯಾಗಿಲ್ಲ. ಉಳಿದ ರೋಗಿಗಳನ್ನು ನಗರದ ಬೇರೊಂದು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇದೇ ವೇಳೆ, ಆಸ್ಪತ್ರೆಯಲ್ಲಿ ವ್ಯಾಪಿಸಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟೂ ಬೇಗ ಚೇತರಿಕೆ ಕಾಣಲಿ ಎಂದು ಹಾರೈಸಿರುವ ಅವರು ಅಹ್ಮದಾಬಾದ್ ಜಿಲ್ಲಾಡಳಿತವು ಎಲ್ಲಾ ನೆರವು ಒದಗಿಸುತ್ತಿದೆ ಎಂದಿದ್ದಾರೆ.
Saddened by the tragic hospital fire in Ahmedabad. Condolences to the bereaved families. May the injured recover soon. Spoke to CM @vijayrupanibjp Ji and Mayor @ibijalpatel Ji regarding the situation. Administration is providing all possible assistance to the affected.
— Narendra Modi (@narendramodi) August 6, 2020
ಹಾಗೆಯೇ, ಪ್ರತಿಯೊಬ್ಬ ಮೃತರ ಕುಟುಂಬಕ್ಕೂ 2 ಲಕ್ಷ ರೂ ಪರಿಹಾರವನ್ನೂ ಪ್ರಧಾನಿಗಳು ಘೋಷಿಸಿದ್ಧಾರೆ. ಪ್ರಧಾನಮಂತ್ರಿ ವಿಪತ್ತು ನಿಧಿಯಿಂದ ಈ ಹಣವನ್ನು ನೀಡಲಾಗುತ್ತಿದೆ. ಹಾಗೆಯೇ, ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಪ್ರಕಟಿಸಿದ್ದಾರೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm