ಬ್ರೇಕಿಂಗ್ ನ್ಯೂಸ್
19-07-23 10:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 19: INDIA ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ.
ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಹೆಚ್ಚು ಗುರುತಿಸಿಕೊಳ್ಳುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹೀಗಾಗಿ ಮೈತ್ರಿ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರ ಡಾ.ಅವನೀಶ್ ಮಿಶ್ರಾ ಒತ್ತಾಯಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಮಂಗಳವಾರ, ಬೆಂಗಳೂರಿನಲ್ಲಿ ನಡೆದ ಜಂಟಿ ಸಭೆಯ ನಂತರ 26 ವಿರೋಧ ಪಕ್ಷಗಳು ತಮ್ಮ ಮೈತ್ರಿಗೆ 'ಇಂಡಿಯಾ' (Indian National Developmental Inclusive Alliance) ಎಂಬ ಹೆಸರು ಘೋಷಿಸಿದ್ದವು.
ಮೈತ್ರಿಯ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿದ ಡಾ.ಅವಿನೀಶ್ ಮಿಶ್ರಾ, ಚುನಾವಣೆಯಲ್ಲಿ ಅನಗತ್ಯವಾಗಿ 'ಇಂಡಿಯಾ' ಎಂಬ ಪದವನ್ನು ಬಳಸುತ್ತಿದ್ದು, ಜನರ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 26 ರಾಜಕೀಯ ಪಕ್ಷಗಳು ದೇಶದ ಹೆಸರನ್ನು ದುರ್ಬಳಕೆ ಮಾಡಿಕೊಂಡಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಲಾಂಛನಗಳ ಕಾಯಿದೆಯ ಸೆಕ್ಷನ್ 2(ಸಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಲಾಂಛನಗಳ ಕಾಯಿದೆಯ ಸೆಕ್ಷನ್ 5, ಲಾಂಛನಗಳ ಕಾಯಿದೆಯ ಸೆಕ್ಷನ್ 3 ರ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ₹ 500 ದಂಡವನ್ನು ವಿಧಿಸಲು ಅವಕಾಶ ನೀಡುತ್ತದೆ ಎಂದು ಎಎನ್ಐ ವರದಿ ಉಲ್ಲೇಖಿಸಿದೆ.
ಮಹಾರಾಷ್ಟ್ರ ಬಿಜೆಪಿ ನಾಯಕ ಅಶುತೋಷ್ ದುಬೆ ಕೂಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, 'ಇಂಡಿಯಾ' ಹೆಸರನ್ನು ಪ್ರತಿಪಕ್ಷಗಳು ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದು ಇದು ದೇಶದ ಘನತೆಗೆ ಅಗೌರವ ತಂದಿದೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ನಿಮ್ಮ ಮಧ್ಯಸ್ಥಿಕೆ ನಮ್ಮ ರಾಷ್ಟ್ರದ ಘನತೆಯನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ದೇಶ ನಿಂತಿರುವ ಪ್ರಜಾಪ್ರಭುತ್ವದ ತತ್ವಗಳನ್ನು ಕಾಪಾಡಲು ಸಹಾಯ ಮಾಡುತ್ತದೆ ಎಂದು ನಾನು ನಂಬುತ್ತೇನೆ ಎಂದು ಬಿಜೆಪಿ ನಾಯಕ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
A police complaint was registered against 26 Opposition parties at Barakhamba Police Station in Delhi for alleged improper use of the name of INDIA and use of the said name for the undue influence and personation at elections," news agency ANI reported.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm