ಬ್ರೇಕಿಂಗ್ ನ್ಯೂಸ್
20-07-23 01:14 pm H K News Desk ದೇಶ - ವಿದೇಶ
ನವದೆಹಲಿ, ಜುಲೈ 20: ಎರಡು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ ಮಣಿಪುರ ರಾಜ್ಯವೇ ಸುಟ್ಟು ಕರಕಲಾಗಿದೆ. ಇದೀಗ ರಾಜ್ಯ ಶಾಂತಿಯತ್ತ ಮರಳುತ್ತಿರುವಾಗಲೇ ಮೇ 4 ರಂದು ನಡೆದಿದೆ ಎನ್ನಲಾದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಮತ್ತೆ ಆಕ್ರೋಶ ಭುಗಿಲೆದ್ದಿದೆ. ಕೆಲವು ಕಡೆ ಮತ್ತೆ ಹಿಂಸಾಚಾರ ಆರಂಭಗೊಂಡಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ.
ರಾಜಧಾನಿ ಇಂಫಾಲ್ನಿಂದ 35 ಕಿಲೋಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗ್ಯಾಂಗ್ ಬೆತ್ತಲೆಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ಮಾಡಿಸಿದ್ದಾರೆ. ಮಹಿಳೆಯರು ಕಣ್ಣೀರಿಡುತ್ತಾ ಬೇಡಿಕೊಂಡರು ಆಕ್ರೋಶಿತರು ಕೇಳಿಸಿಕೊಂಡಿಲ್ಲ. ಇದರ ಬದಲು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ.
ಸತತ ಪ್ರಯತ್ನಗಳ ಬಳಿಕ ಹಿಂಸಾಚಾರ ತಣ್ಣಗಾಗಿತ್ತು. ಆದರೆ ಕೆಲವು ಪ್ರದೇಶಗಳಲ್ಲಿ ಭುಗಿಲೆದ್ದ ಪ್ರತಿಭಟನೆ, ಹಿಂಸಚಾರವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗಿತ್ತು. ಇದೀಗ ವಿಕೃತು ಮೆರೆದಿರುವ ವಿಡಿಯೋ ಹೊರ ಬಂದಿರುವುದು ಬುಡಕಟ್ಟು ಸಮುದಾಯಗಳನ್ನು ಮತ್ತಷ್ಟು ಕೆರಳಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್, ಮಣಿಪುರ ಹಿಂಸಾಚಾರ ಕುರಿತು ವಿಚಾರಣೆ ನಡೆಸಿತ್ತು. ‘ಮಣಿಪುರದಲ್ಲಿ ಮತ್ತಷ್ಟು ಕಿಚ್ಚು ಹಚ್ಚಲು ಸುಪ್ರೀಂ ಕೋರ್ಟನ್ನು ವೇದಿಕೆ ಆಗಿ ಬಳಸಿಕೊಳ್ಳಬೇಡಿ’ ಎಂದು ಕೋರ್ಟ್ ಕಿಡಿಕಾರಿತ್ತು.
ಮಣಿಪುರದ ವಸ್ತುಸ್ಥಿತಿ ವರದಿ ಸಲ್ಲಿಸಿದ ರಾಜ್ಯ ಸರ್ಕಾರ, 142 ಜನರು ಗಲಭೆಯಲ್ಲಿ ಸಾವನ್ನಪ್ಪಿದ್ದಾರೆ. 5,995 ಎಫ್ಐಆರ್ ದಾಖಲಾಗಿದ್ದು, 6745 ಜನರನ್ನು ಬಂಧಿಸಲಾಗಿದೆ. 6 ಕೇಸುಗಳ ತನಿಖೆಯನ್ನು ಸಿಬಿಐ ನಡೆಸುತ್ತಿದೆ ಎಂದು ಹೇಳಿಕೆ ನೀಡಿದೆ.
A video showing two women being paraded naked by a mob in the violence-hit northeastern state of Manipur has sparked outrage in India. The police say they have opened a case of gang rape and arrested a man, adding that others will be held soon.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm