ಬ್ರೇಕಿಂಗ್ ನ್ಯೂಸ್
20-07-23 01:14 pm H K News Desk ದೇಶ - ವಿದೇಶ
ನವದೆಹಲಿ, ಜುಲೈ 20: ಎರಡು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ ಮಣಿಪುರ ರಾಜ್ಯವೇ ಸುಟ್ಟು ಕರಕಲಾಗಿದೆ. ಇದೀಗ ರಾಜ್ಯ ಶಾಂತಿಯತ್ತ ಮರಳುತ್ತಿರುವಾಗಲೇ ಮೇ 4 ರಂದು ನಡೆದಿದೆ ಎನ್ನಲಾದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಮತ್ತೆ ಆಕ್ರೋಶ ಭುಗಿಲೆದ್ದಿದೆ. ಕೆಲವು ಕಡೆ ಮತ್ತೆ ಹಿಂಸಾಚಾರ ಆರಂಭಗೊಂಡಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ.
ರಾಜಧಾನಿ ಇಂಫಾಲ್ನಿಂದ 35 ಕಿಲೋಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗ್ಯಾಂಗ್ ಬೆತ್ತಲೆಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ಮಾಡಿಸಿದ್ದಾರೆ. ಮಹಿಳೆಯರು ಕಣ್ಣೀರಿಡುತ್ತಾ ಬೇಡಿಕೊಂಡರು ಆಕ್ರೋಶಿತರು ಕೇಳಿಸಿಕೊಂಡಿಲ್ಲ. ಇದರ ಬದಲು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ.
ಸತತ ಪ್ರಯತ್ನಗಳ ಬಳಿಕ ಹಿಂಸಾಚಾರ ತಣ್ಣಗಾಗಿತ್ತು. ಆದರೆ ಕೆಲವು ಪ್ರದೇಶಗಳಲ್ಲಿ ಭುಗಿಲೆದ್ದ ಪ್ರತಿಭಟನೆ, ಹಿಂಸಚಾರವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗಿತ್ತು. ಇದೀಗ ವಿಕೃತು ಮೆರೆದಿರುವ ವಿಡಿಯೋ ಹೊರ ಬಂದಿರುವುದು ಬುಡಕಟ್ಟು ಸಮುದಾಯಗಳನ್ನು ಮತ್ತಷ್ಟು ಕೆರಳಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್, ಮಣಿಪುರ ಹಿಂಸಾಚಾರ ಕುರಿತು ವಿಚಾರಣೆ ನಡೆಸಿತ್ತು. ‘ಮಣಿಪುರದಲ್ಲಿ ಮತ್ತಷ್ಟು ಕಿಚ್ಚು ಹಚ್ಚಲು ಸುಪ್ರೀಂ ಕೋರ್ಟನ್ನು ವೇದಿಕೆ ಆಗಿ ಬಳಸಿಕೊಳ್ಳಬೇಡಿ’ ಎಂದು ಕೋರ್ಟ್ ಕಿಡಿಕಾರಿತ್ತು.
ಮಣಿಪುರದ ವಸ್ತುಸ್ಥಿತಿ ವರದಿ ಸಲ್ಲಿಸಿದ ರಾಜ್ಯ ಸರ್ಕಾರ, 142 ಜನರು ಗಲಭೆಯಲ್ಲಿ ಸಾವನ್ನಪ್ಪಿದ್ದಾರೆ. 5,995 ಎಫ್ಐಆರ್ ದಾಖಲಾಗಿದ್ದು, 6745 ಜನರನ್ನು ಬಂಧಿಸಲಾಗಿದೆ. 6 ಕೇಸುಗಳ ತನಿಖೆಯನ್ನು ಸಿಬಿಐ ನಡೆಸುತ್ತಿದೆ ಎಂದು ಹೇಳಿಕೆ ನೀಡಿದೆ.
A video showing two women being paraded naked by a mob in the violence-hit northeastern state of Manipur has sparked outrage in India. The police say they have opened a case of gang rape and arrested a man, adding that others will be held soon.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm