ಬ್ರೇಕಿಂಗ್ ನ್ಯೂಸ್
24-07-23 01:36 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಜು.24: ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಪತ್ನಿ ಮತ್ತು ಸೋದರಳಿಯನನ್ನು ತನ್ನ ರಿವಾಲ್ವರ್ನಿಂದ ಗುಂಡಿಕ್ಕಿ ಬಳಿಕ ತಾನೂ ಹಣೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಮೃತರನ್ನು ಎಸಿಪಿ ಭರತ್ ಗಾಯಕ್ವಾಡ್, ಅವರ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ.
ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ.
ಪೊಲೀಸರ ಪ್ರಕಾರ, ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದು, ಅವರು ಪತ್ನಿ ಮತ್ತು ಸೋದರಳಿಯನೊಂದಿಗೆ ಪುಣೆಯ ಬನೇರ್ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ಮೊದಲು ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡಿನ ಸದ್ದು ಕೇಳಿ ಅವರ ಮಗ ಮತ್ತು ಸೋದರಳಿಯ ಓಡಿ ಬಂದು ಬಾಗಿಲು ತೆರೆದರು. ಅವರು ಬಾಗಿಲು ತೆರೆದ ಕೂಡಲೆ ಸೋದರಳಿಯನ ಮೇಲೆ ಗುಂಡು ಹಾರಿಸಿ ಬಳಿಕ ತಾನು ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 57-year-old assistant commissioner of police (ACP) allegedly shot dead his wife and nephew with a gun before shooting himself fatally at his home in Maharashtra's Pune city on Monday, an official said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm