ಬ್ರೇಕಿಂಗ್ ನ್ಯೂಸ್
24-07-23 04:53 pm HK News Desk ದೇಶ - ವಿದೇಶ
ದೆಹಲಿ, ಜು.24: ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣಕ್ಕೆ ಕಳ್ಳರು ನಿರಾಶರಾಗಿ ಮನೆಯಲ್ಲಿ 500 ರೂಪಾಯಿಯ ನೋಟನ್ನು ಇಟ್ಟುಹೋದ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ದೆಹಲಿಯ ರೋಹಿಣಿ ಸೆಕ್ಟರ್ 8 ನಲ್ಲಿರುವ ಎಂ ರಾಮಕೃಷ್ಣ ಎನ್ನುವವರ ಮನೆಯ ಮುಖ್ಯ ಗೇಟ್ನ ಬೀಗ ಮುರಿದು ಕೆಲ ಕಳ್ಳರು ಕಳ್ಳತನ ಮಾಡಲು ಬಂದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ಕಳ್ಳರು ಮನೆಯೊಳಗೆ ಹೋಗಿ ಎಲ್ಲಾ ಕಡೆ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಇಡೀ ಮನೆಯಲ್ಲಿ ಏನೂ ಸಿಗದ ಕಾರಣ ಕಳ್ಳರು ವಾಪಾಸ್ ಹೋಗಿದ್ದಾರೆ. ಆದರೆ ವಾಪಾಸ್ ಹೋಗುವ ವೇಳೆ ಕಳ್ಳತನಕ್ಕೆಂದು ಬಂದ ಮನೆಯ ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟನ್ನು ಇಟ್ಟು ತೆರಳಿದ್ದಾರೆ.
ಜುಲೈ 19ರ ಬುಧವಾರ ಬೆಳಗ್ಗೆ ಗುರುಗ್ರಾಮಕ್ಕೆ ಪತ್ನಿಯೊಂದಿಗೆ ತೆರಳಿದ್ದ ಎಂ ರಾಮಕೃಷ್ಣ ಮನೆಗೆ ಬಂದು ನೋಡುವಾಗ ಮುಖ್ಯ ಗೇಟ್ನ ಬೀಗ ಮುರಿದಿರುವುದು ಕಂಡು ಬಂದಿದೆ. ಈ ವೇಳೆ ಮನೆಯ ಒಳಗೆ ಹೋಗಿ ನೋಡಿದ್ದಾರೆ. ಆದರೆ ಮನೆಯಿಂದ ಯಾವ ವಸ್ತು ಕೂಡ ಕಾಣೆಯಾಗಿರಲಿಲ್ಲ. ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟು ಇರುವುದನ್ನು ಗಮನಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಟ್ಟಿರಲಿಲ್ಲ ಎಂದು ಎಂ ರಾಮಕೃಷ್ಣ ಪೊಲೀಸರಿಗೆ ತಿಳಿಸಿದ್ದಾರೆ. ದಂಪತಿ ಹಿಂತಿರುಗಿದಾಗ ಅಲ್ಮೇರಾಗಳು ಸಹ ಹಾಗೇ ಇದ್ದವು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Robbers and crime gangs in national capital Delhi seem to be becoming more philanthropic as two incidents were reported wherein the criminals left money with their victims upon finding nothing worthy to steal.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm