ಬ್ರೇಕಿಂಗ್ ನ್ಯೂಸ್
24-07-23 04:53 pm HK News Desk ದೇಶ - ವಿದೇಶ
ದೆಹಲಿ, ಜು.24: ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣಕ್ಕೆ ಕಳ್ಳರು ನಿರಾಶರಾಗಿ ಮನೆಯಲ್ಲಿ 500 ರೂಪಾಯಿಯ ನೋಟನ್ನು ಇಟ್ಟುಹೋದ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ದೆಹಲಿಯ ರೋಹಿಣಿ ಸೆಕ್ಟರ್ 8 ನಲ್ಲಿರುವ ಎಂ ರಾಮಕೃಷ್ಣ ಎನ್ನುವವರ ಮನೆಯ ಮುಖ್ಯ ಗೇಟ್ನ ಬೀಗ ಮುರಿದು ಕೆಲ ಕಳ್ಳರು ಕಳ್ಳತನ ಮಾಡಲು ಬಂದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ಕಳ್ಳರು ಮನೆಯೊಳಗೆ ಹೋಗಿ ಎಲ್ಲಾ ಕಡೆ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಇಡೀ ಮನೆಯಲ್ಲಿ ಏನೂ ಸಿಗದ ಕಾರಣ ಕಳ್ಳರು ವಾಪಾಸ್ ಹೋಗಿದ್ದಾರೆ. ಆದರೆ ವಾಪಾಸ್ ಹೋಗುವ ವೇಳೆ ಕಳ್ಳತನಕ್ಕೆಂದು ಬಂದ ಮನೆಯ ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟನ್ನು ಇಟ್ಟು ತೆರಳಿದ್ದಾರೆ.
ಜುಲೈ 19ರ ಬುಧವಾರ ಬೆಳಗ್ಗೆ ಗುರುಗ್ರಾಮಕ್ಕೆ ಪತ್ನಿಯೊಂದಿಗೆ ತೆರಳಿದ್ದ ಎಂ ರಾಮಕೃಷ್ಣ ಮನೆಗೆ ಬಂದು ನೋಡುವಾಗ ಮುಖ್ಯ ಗೇಟ್ನ ಬೀಗ ಮುರಿದಿರುವುದು ಕಂಡು ಬಂದಿದೆ. ಈ ವೇಳೆ ಮನೆಯ ಒಳಗೆ ಹೋಗಿ ನೋಡಿದ್ದಾರೆ. ಆದರೆ ಮನೆಯಿಂದ ಯಾವ ವಸ್ತು ಕೂಡ ಕಾಣೆಯಾಗಿರಲಿಲ್ಲ. ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟು ಇರುವುದನ್ನು ಗಮನಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಟ್ಟಿರಲಿಲ್ಲ ಎಂದು ಎಂ ರಾಮಕೃಷ್ಣ ಪೊಲೀಸರಿಗೆ ತಿಳಿಸಿದ್ದಾರೆ. ದಂಪತಿ ಹಿಂತಿರುಗಿದಾಗ ಅಲ್ಮೇರಾಗಳು ಸಹ ಹಾಗೇ ಇದ್ದವು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Robbers and crime gangs in national capital Delhi seem to be becoming more philanthropic as two incidents were reported wherein the criminals left money with their victims upon finding nothing worthy to steal.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm