ಬ್ರೇಕಿಂಗ್ ನ್ಯೂಸ್
24-07-23 04:53 pm HK News Desk ದೇಶ - ವಿದೇಶ
ದೆಹಲಿ, ಜು.24: ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣಕ್ಕೆ ಕಳ್ಳರು ನಿರಾಶರಾಗಿ ಮನೆಯಲ್ಲಿ 500 ರೂಪಾಯಿಯ ನೋಟನ್ನು ಇಟ್ಟುಹೋದ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ದೆಹಲಿಯ ರೋಹಿಣಿ ಸೆಕ್ಟರ್ 8 ನಲ್ಲಿರುವ ಎಂ ರಾಮಕೃಷ್ಣ ಎನ್ನುವವರ ಮನೆಯ ಮುಖ್ಯ ಗೇಟ್ನ ಬೀಗ ಮುರಿದು ಕೆಲ ಕಳ್ಳರು ಕಳ್ಳತನ ಮಾಡಲು ಬಂದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ಕಳ್ಳರು ಮನೆಯೊಳಗೆ ಹೋಗಿ ಎಲ್ಲಾ ಕಡೆ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಇಡೀ ಮನೆಯಲ್ಲಿ ಏನೂ ಸಿಗದ ಕಾರಣ ಕಳ್ಳರು ವಾಪಾಸ್ ಹೋಗಿದ್ದಾರೆ. ಆದರೆ ವಾಪಾಸ್ ಹೋಗುವ ವೇಳೆ ಕಳ್ಳತನಕ್ಕೆಂದು ಬಂದ ಮನೆಯ ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟನ್ನು ಇಟ್ಟು ತೆರಳಿದ್ದಾರೆ.
ಜುಲೈ 19ರ ಬುಧವಾರ ಬೆಳಗ್ಗೆ ಗುರುಗ್ರಾಮಕ್ಕೆ ಪತ್ನಿಯೊಂದಿಗೆ ತೆರಳಿದ್ದ ಎಂ ರಾಮಕೃಷ್ಣ ಮನೆಗೆ ಬಂದು ನೋಡುವಾಗ ಮುಖ್ಯ ಗೇಟ್ನ ಬೀಗ ಮುರಿದಿರುವುದು ಕಂಡು ಬಂದಿದೆ. ಈ ವೇಳೆ ಮನೆಯ ಒಳಗೆ ಹೋಗಿ ನೋಡಿದ್ದಾರೆ. ಆದರೆ ಮನೆಯಿಂದ ಯಾವ ವಸ್ತು ಕೂಡ ಕಾಣೆಯಾಗಿರಲಿಲ್ಲ. ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟು ಇರುವುದನ್ನು ಗಮನಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಟ್ಟಿರಲಿಲ್ಲ ಎಂದು ಎಂ ರಾಮಕೃಷ್ಣ ಪೊಲೀಸರಿಗೆ ತಿಳಿಸಿದ್ದಾರೆ. ದಂಪತಿ ಹಿಂತಿರುಗಿದಾಗ ಅಲ್ಮೇರಾಗಳು ಸಹ ಹಾಗೇ ಇದ್ದವು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Robbers and crime gangs in national capital Delhi seem to be becoming more philanthropic as two incidents were reported wherein the criminals left money with their victims upon finding nothing worthy to steal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm