ಬ್ರೇಕಿಂಗ್ ನ್ಯೂಸ್
24-07-23 06:27 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 24: ಇತ್ತೀಚೆಗೆ ಪಬ್ ಜೀ ಗೇಮ್ ಆಡುತ್ತಾ ಪ್ರಿಯಕರನ ಜೊತೆ ಸೇರಲು ಪಾಕಿಸ್ತಾನದ ಮಹಿಳೆ ಅಕ್ರಮವಾಗಿ ಭಾರತಕ್ಕೆ ಬಂದಿದ್ದು ಸುದ್ದಿಯಾಗಿತ್ತು. ಆಕೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿರುವಾಗಲೇ ಭಾರತದ ಮಹಿಳೆಯೊಬ್ಬರು ತನ್ನ ಗಂಡನ ಬಿಟ್ಟು ಫೇಸ್ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆ ಅಂಜು ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ನಸ್ರುಲ್ಲಾ ಅವರನ್ನು ಭೇಟಿಯಾಗಲು ಪಾಕ್ ಗೆ ತೆರಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಜು ಪತಿ ಅರವಿಂದ್, ಅಂಜು ಜೈಪುರಕ್ಕೆ ಹೋಗುವುದಾಗಿ ಹೇಳಿದ್ದಳು. ಮಾಧ್ಯಮಗಳ ಮೂಲಕ ಪತ್ನಿ ಪಾಕಿಸ್ತಾನಕ್ಕೆ ಹೋಗಿದ್ದಾಳೆ ಎಂಬುದು ತಿಳಿದುಬಂದಿದೆ. ಜುಲೈ 23ರಂದು ಅಂಜು ವಾಟ್ಸಾಪ್ ಕರೆ ಮಾಡಿ ನಾನು ಲಾಹೋರ್ ನಲ್ಲಿದ್ದೇನೆ. 3-4 ದಿನದಲ್ಲಿ ಬರುವುದಾಗಿ ತಿಳಿಸಿದ್ದಾಳೆ. ವಿದೇಶದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸಿದ್ದರಿಂದ 2020 ರಲ್ಲಿ ಪಾಸ್ಪೋರ್ಟ್ ಮಾಡಿಸಿಕೊಂಡಿದ್ದಳು ಎಂದು ಹೇಳಿದ್ದಾರೆ.
ಅಂಜು - ಅರವಿಂದ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಅರವಿಂದ್ ಅವರನ್ನು ಮದುವೆಯಾಗಿದ್ದರು. ಈ ನಡುವೆ, ಅಂಜುಗೆ ಫೇಸ್ ಬುಕ್ ನಲ್ಲಿ ಪಾಕ್ ಮೂಲದ ನಸ್ರುಲ್ಲಾ ಪರಿಚಯ ಆಗಿದ್ದು ಸಲುಗೆ ಬೆಳೆಸಿಕೊಂಡಿದ್ದಳು. ಈಗ ಪ್ರಿಯಕರನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ಅಂಜು ತೆರಳಿದ್ದಾರೆ ಎನ್ನಲಾಗುತ್ತಿದೆ. ಪಾಕಿಸ್ತಾನದಲ್ಲಿ ಅಂಜುವನ್ನು ತನಿಖೆಗೆ ಒಳಪಡಿಸಿದ ಪೊಲೀಸರು ಮೊದಲಿಗೆ ಕಸ್ಟಡಿಯಲ್ಲಿರಿಸಿದ್ದರು. ಪ್ರಯಾಣದ ದಾಖಲೆಗಳನ್ನು ಪರಿಶೀಲಿಸಿ ಬಿಡುಗಡೆ ಮಾಡಿದ್ದರು.
While the investigation is still on to determine Seema Haider's future in India, a similar incident has come to light where a married Indian woman travelled to Pakistan to meet her lover in the Khyber Pakhtunkhwa province.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm