ಬ್ರೇಕಿಂಗ್ ನ್ಯೂಸ್
24-07-23 10:49 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 24: ಕಾಶಿ ವಿಶ್ವನಾಥನ ಸನ್ನಿಧಿಯ ಆವರಣದಲ್ಲೇ ಇರುವ ವಿವಾದಿತ ಜ್ಞಾನವಾಪಿ ಮಸೀದಿಯ ಕುರಿತು ಪ್ರಾಚ್ಯವಸ್ತು ಇಲಾಖೆಯಿಂದ ಸಮೀಕ್ಷೆ ಕೈಗೆತ್ತಿಕೊಂಡ ಬೆನ್ನಲ್ಲೇ ಸುಪ್ರೀಂ ಕೋರ್ಟ್ ತಡೆ ಹಾಕಿದೆ.
ಮಸೀದಿ ಕಮಿಟಿಯ ಆಕ್ಷೇಪವನ್ನು ಮನ್ನಿಸಿದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಎರಡು ದಿನಗಳ ಕಾಲಾವಕಾಶ ನೀಡಿದ್ದು, ಜುಲೈ 26ರ ಸಂಜೆ 5 ಗಂಟೆ ವರೆಗೆ ಎಎಸ್ಐ ಸರ್ವೇ ನಡೆಸದಂತೆ ನಿರ್ದೇಶನ ನೀಡಿದೆ. ಅಲ್ಲದೆ, ಅಷ್ಟರೊಳಗೆ ಅಲಹಾಬಾದ್ ಹೈಕೋರ್ಟಿನಲ್ಲಿ ಆಕ್ಷೇಪ ಸಲ್ಲಿಸುವಂತೆ ಸೂಚನೆ ನೀಡಿದೆ.
ಎರಡು ವರ್ಷಗಳ ಜಟಾಪಟಿ ಬಳಿಕ ವಾರಣಾಸಿ ಜಿಲ್ಲಾ ಕೋರ್ಟ್, ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸರ್ವೇ ನಡೆಸುವಂತೆ ಪ್ರಾಚ್ಯವಸ್ತು ಇಲಾಖೆಗೆ ನಿರ್ದೇಶನ ನೀಡಿತ್ತು. ಅಲ್ಲದೆ, ಪೂರ್ತಿ ಸರ್ವೇ ಪ್ರಕ್ರಿಯೆಯನ್ನು ವಿಡಿಯೋ ರೆಕಾರ್ಡ್ ಮಾಡುವಂತೆ ಸೂಚಿಸಿತ್ತು. ಅದರಂತೆ, ಜುಲೈ 24ರ ಸೋಮವಾರದಿಂದ ಸರ್ವೇ ಆರಂಭಿಸಿ, ಆಗಸ್ಟ್ 4ರೊಳಗೆ ವರದಿ ನೀಡುವಂತೆ ಕೋರ್ಟ್ ಸೂಚಿಸಿತ್ತು. ಆದೇಶ ಅನುಸಾರ, ಸೋಮವಾರ ಬೆಳಗ್ಗೆ ಏಳು ಗಂಟೆಗೆ ಬಿಗಿ ಬಂದೋಬಸ್ತಿನಲ್ಲಿ ಸರ್ವೆ ಆರಂಭಗೊಂಡಿತ್ತು. 30 ಮಂದಿ ಅಧಿಕಾರಿಗಳಿದ್ದ ತಂಡವು ಸರ್ವೇ ಕೆಲಸವನ್ನು ಆರಂಭಿಸಿತ್ತು.

ಆದರೆ, ವಾರಣಾಸಿ ಜಿಲ್ಲಾ ಕೋರ್ಟಿನ ಆದೇಶವನ್ನು ಪ್ರಶ್ನಿಸಿ ಮತ್ತು ಸರ್ವೇ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿ ಮಸೀದಿ ಕಮಿಟಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ತುರ್ತಾಗಿ ಪರಿಗಣಿಸುವಂತೆ ಕೋರಿದ್ದ ಅಹವಾಲಿಗೆ ಸ್ಪಂದಿಸಿದ ಮೂವರು ಸದಸ್ಯರಿದ್ದ ಪೀಠವು, ಅರ್ಜಿದಾರರಿಗೆ ಉಸಿರಾಟಕ್ಕೆ ಅವಕಾಶ ನೀಡಬೇಕೆಂದು ಹೇಳಿ ಸರ್ವೇ ಪ್ರಕ್ರಿಯೆಗೆ ತಡೆ ನೀಡಿದ್ದಲ್ಲದೆ, ಎರಡು ದಿನಗಳ ಮಟ್ಟಿಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ, ರಾಡಾರ್ ಪರೀಕ್ಷೆ ಮೂಲಕ ನಡೆಸುವ ವೈಜ್ಞಾನಿಕ ಸರ್ವೇ ಸಂದರ್ಭದಲ್ಲಿ ಮಸೀದಿಯ ಒಂದು ಇಟ್ಟಿಗೆ ಕಲ್ಲು ಕೂಡ ಹಾಳಾಗದಂತೆ ನೋಡಿಕೊಳ್ಳಬೇಕು. ಯಾವುದೇ ಸಿಮೆಂಟ್ ತುಂಡನ್ನೂ ಎಬ್ಬಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಲ್ಲದೆ, ಎರಡು ದಿನದೊಳಗೆ ಹೈಕೋರ್ಟಿನಲ್ಲಿ ಈ ಬಗ್ಗೆ ಅಹವಾಲು ಸಲ್ಲಿಸುವಂತೆ ಸೂಚನೆ ನೀಡಿದೆ. ಜಿಲ್ಲಾ ಕೋರ್ಟಿನ ಆದೇಶವನ್ನು ಪ್ರಶ್ನಿಸಿ, ಹೈಕೋರ್ಟಿಗೆ ಹೋಗುವ ಅವಕಾಶ ಇರುವಾಗ ಸುಪ್ರೀಂ ಕೋರ್ಟಿಗೆ ಯಾಕೆ ಬಂದಿದ್ದೀರಿ ಎಂದು ಮುಖ್ಯ ನ್ಯಾಯಾಧೀಶರು ಕೇಳಿದ್ದು ಎರಡು ದಿನಗಳ ಕಾಲಾವಕಾಶ ನೀಡುವುದಾಗಿ ಹೇಳಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ ವಾರಣಾಸಿ ಕೋರ್ಟ್ ನೀಡಿದ್ದ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಎತ್ತಿ ಹಿಡಿದಿದ್ದರಿಂದ ಮಸೀದಿ ಕಮಿಟಿಯವರು ನೇರವಾಗಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
The Supreme Court on Monday stayed the Varanasi district court order until 5 pm on July 26 allowing scientific excavation of the Gyanvapi mosque complex survey by the Archaeological Survey of India (ASI) to ascertain whether the masjid was built over a pre-existing Hindu temple.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm