ಬ್ರೇಕಿಂಗ್ ನ್ಯೂಸ್
29-07-23 04:38 pm HK News Desk ದೇಶ - ವಿದೇಶ
ಬೊಕಾರೊ, ಜುಲೈ 29: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಉಂಟಾದ ವಿದ್ಯುತ್ ಅವಘಡದಲ್ಲಿ ನಾಲ್ಕು ಮಂದಿ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರೆ, ಇನ್ನು 13 ಮಂದಿ ಗಾಯಗೊಂಡಿದ್ದಾರೆ. ಜಾರ್ಖಂಡ್ನ ಬೊಕಾರೊದಲ್ಲಿ ಶನಿವಾರ ಈ ಭೀಕರ ಘಟನೆ ನಡೆದಿದೆ.
ಮುಸ್ಲಿಂ ಸಮುದಾಯದ ಗುಂಪು ಮೊಹರಂ ಮೆರವಣಿಗೆಯಲ್ಲಿ ಸಾಗಿಸುತ್ತಿದ್ದ 'ತಾಜಿಯಾ'ವು 11 ಸಾವಿರ ಹೈ ವೋಲ್ಟೇಜ್ ವೈರ್ಗೆ ತಗುಲಿದ್ದರಿಂದ ಭಾರಿ ಸ್ಫೋಟ ಸಂಭವಿಸಿದೆ. ಅದರ ಬೆನ್ನಲ್ಲೇ ಅವಘಡ ಉಂಟಾಗಿದೆ.

ಗಾಯಗೊಂಡಿರುವ ವ್ಯಕ್ತಿಗಳನ್ನು ತಕ್ಷಣದ ಚಿಕಿತ್ಸೆಗಾಗಿ ಬೊಕಾರೋದ ಥರ್ಮಲ್ ಡಿವಿಸಿ ಆಸ್ಪತ್ರೆಗೆ ಕೂಡಲೇ ದಾಖಲು ಮಾಡಲಾಗಿದೆ. 13 ಮಂದಿ ಗಾಯಾಳುಗಳ ಪೈಕಿ 9 ಮಂದಿಯ ಸ್ಥಿತಿ ಗಂಭೀರವಾಗಿದೆ. ಸ್ಫೋಟಕ್ಕೆ ಕಾರಣ ತಿಳಿಯುವ ಸಲುವಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ರಾಜಧಾನಿ ರಾಂಚಿಯಿಂದ ಸುಮಾರು 80 ಕಿಮೀ ದೂರದಲ್ಲಿನ ಪೆಟಾರ್ವರ್ ಪೊಲೀಸ್ ಠಾಣೆ ವ್ಯಾಪ್ತಿಯ ಖೆಟ್ಕೋ ಗ್ರಾಮದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು. ಧಾರ್ಮಿಕ ಧ್ವಜವನ್ನು ಅಳವಡಿಸಿದ ಕಬ್ಬಿಣದ ರಾಡು, 11,000 ಹೈ ವೋಲ್ಟೇಜ್ ವಿದ್ಯುತ್ ಹರಿಯುತ್ತಿದ್ದ ತಂತಿಗೆ ತಗುಲಿದ್ದರಿಂದ ಅನಾಹುತ ಸಂಭವಿಸಿದೆ ಎಂದು ಬೊಕಾರೋ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿನಿ ಅಲೋಕ್ ತಿಳಿಸಿದ್ದಾರೆ.
![]()
ಶನಿವಾರ ಮುಂಜಾನೆ 6 ಗಂಟೆ ಸುಮಾರಿಗೆ ಅವರು ಮೊಹರಂ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿದ್ದರು. ಧಾರ್ಮಿಕ ಧ್ವಜ ಅಂಟಿಸಿದ ಕಬ್ಬಿಣದ ಕಂಬವು ವಿದ್ಯುತ್ ತಂತಿಗೆ ತಗುಲಿದ್ದು, ಅಲ್ಲಿದ್ದ ಅನೇಕರಿಗೆ ವಿದ್ಯುತ್ ಆಘಾತವಾಗಿದೆ" ಎಂದು ಅವರು ಹೇಳಿದ್ದಾರೆ.
ಗಾಯಾಳುಗಳನ್ನು ಬೊಕಾರೋ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
Four men were electrocuted, while 13 others were injured while carrying out a Muharram procession in Jharkhand’s Bokaro on Saturday. The incident occurred while the ‘Tazia’ came in contact with an 11,000 high-voltage tension wire, resulting in a blast.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm