ಬ್ರೇಕಿಂಗ್ ನ್ಯೂಸ್
29-07-23 04:38 pm HK News Desk ದೇಶ - ವಿದೇಶ
ಬೊಕಾರೊ, ಜುಲೈ 29: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಉಂಟಾದ ವಿದ್ಯುತ್ ಅವಘಡದಲ್ಲಿ ನಾಲ್ಕು ಮಂದಿ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರೆ, ಇನ್ನು 13 ಮಂದಿ ಗಾಯಗೊಂಡಿದ್ದಾರೆ. ಜಾರ್ಖಂಡ್ನ ಬೊಕಾರೊದಲ್ಲಿ ಶನಿವಾರ ಈ ಭೀಕರ ಘಟನೆ ನಡೆದಿದೆ.
ಮುಸ್ಲಿಂ ಸಮುದಾಯದ ಗುಂಪು ಮೊಹರಂ ಮೆರವಣಿಗೆಯಲ್ಲಿ ಸಾಗಿಸುತ್ತಿದ್ದ 'ತಾಜಿಯಾ'ವು 11 ಸಾವಿರ ಹೈ ವೋಲ್ಟೇಜ್ ವೈರ್ಗೆ ತಗುಲಿದ್ದರಿಂದ ಭಾರಿ ಸ್ಫೋಟ ಸಂಭವಿಸಿದೆ. ಅದರ ಬೆನ್ನಲ್ಲೇ ಅವಘಡ ಉಂಟಾಗಿದೆ.
ಗಾಯಗೊಂಡಿರುವ ವ್ಯಕ್ತಿಗಳನ್ನು ತಕ್ಷಣದ ಚಿಕಿತ್ಸೆಗಾಗಿ ಬೊಕಾರೋದ ಥರ್ಮಲ್ ಡಿವಿಸಿ ಆಸ್ಪತ್ರೆಗೆ ಕೂಡಲೇ ದಾಖಲು ಮಾಡಲಾಗಿದೆ. 13 ಮಂದಿ ಗಾಯಾಳುಗಳ ಪೈಕಿ 9 ಮಂದಿಯ ಸ್ಥಿತಿ ಗಂಭೀರವಾಗಿದೆ. ಸ್ಫೋಟಕ್ಕೆ ಕಾರಣ ತಿಳಿಯುವ ಸಲುವಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ರಾಜಧಾನಿ ರಾಂಚಿಯಿಂದ ಸುಮಾರು 80 ಕಿಮೀ ದೂರದಲ್ಲಿನ ಪೆಟಾರ್ವರ್ ಪೊಲೀಸ್ ಠಾಣೆ ವ್ಯಾಪ್ತಿಯ ಖೆಟ್ಕೋ ಗ್ರಾಮದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು. ಧಾರ್ಮಿಕ ಧ್ವಜವನ್ನು ಅಳವಡಿಸಿದ ಕಬ್ಬಿಣದ ರಾಡು, 11,000 ಹೈ ವೋಲ್ಟೇಜ್ ವಿದ್ಯುತ್ ಹರಿಯುತ್ತಿದ್ದ ತಂತಿಗೆ ತಗುಲಿದ್ದರಿಂದ ಅನಾಹುತ ಸಂಭವಿಸಿದೆ ಎಂದು ಬೊಕಾರೋ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿನಿ ಅಲೋಕ್ ತಿಳಿಸಿದ್ದಾರೆ.
ಶನಿವಾರ ಮುಂಜಾನೆ 6 ಗಂಟೆ ಸುಮಾರಿಗೆ ಅವರು ಮೊಹರಂ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿದ್ದರು. ಧಾರ್ಮಿಕ ಧ್ವಜ ಅಂಟಿಸಿದ ಕಬ್ಬಿಣದ ಕಂಬವು ವಿದ್ಯುತ್ ತಂತಿಗೆ ತಗುಲಿದ್ದು, ಅಲ್ಲಿದ್ದ ಅನೇಕರಿಗೆ ವಿದ್ಯುತ್ ಆಘಾತವಾಗಿದೆ" ಎಂದು ಅವರು ಹೇಳಿದ್ದಾರೆ.
ಗಾಯಾಳುಗಳನ್ನು ಬೊಕಾರೋ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
Four men were electrocuted, while 13 others were injured while carrying out a Muharram procession in Jharkhand’s Bokaro on Saturday. The incident occurred while the ‘Tazia’ came in contact with an 11,000 high-voltage tension wire, resulting in a blast.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 12:00 pm
Mangalore Correspondent
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
23-07-25 11:36 am
Udupi Correspondent
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm