ಬ್ರೇಕಿಂಗ್ ನ್ಯೂಸ್
07-08-23 06:21 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 8: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಆದೇಶವನ್ನು ಸೋಮವಾರ ರದ್ದುಪಡಿಸಲಾಗಿದೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಲೋಕಸಭೆ ಸಚಿವಾಲಯ, ರಾಹುಲ್ ಗಾಂಧಿಯವರ ಸದಸ್ಯತ್ವ ಅನರ್ಹತೆಯನ್ನು ಹಿಂಪಡೆಯಲಾಗಿದ್ದು, ಸದಸ್ಯತ್ವವನ್ನು ಮರು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್ನ ಸೂರತ್ ನ್ಯಾಯಾಲಯ, ಮಾರ್ಚ್ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯಂತೆ ರಾಹುಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಸೂರತ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಿಕ್ಷೆಗೆ ತಡೆ ನೀಡಿದ್ದಲ್ಲದೆ ಎರಡು ವರ್ಷಗಳ ಶಿಕ್ಷೆ ನೀಡಿದ್ದರ ಔಚಿತ್ಯ ಪ್ರಶ್ನಿಸಿತ್ತು. ಮೋದಿ ಹೆಸರಿನ ಪದನಾಮ ವಿಷಯದಲ್ಲಿ 2019 ಲೋಕಸಭೆ ಚುನಾವಣೆ ಸಂದರ್ಭ ರಾಹುಲ್ ಗಾಂಧಿ ಕರ್ನಾಟಕದ ಕೋಲಾರದಲ್ಲಿ ಮಾಡಿದ್ದ ಭಾಷಣ ಆಕ್ಷೇಪಕ್ಕೆ ಕಾರಣವಾಗಿತ್ತು.
ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭೆ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು. ಈಗ ಅದೇ ಕ್ಷೇತ್ರದ ಸಂಸದರಾಗಿ ಮುಂದುವರಿಯುವಂತಾಗಿದೆ.
Congress leader Rahul Gandhi’s Lok Sabha membership has been restored as the House secretariat issued a notification revoking his disqualification on Monday, 137 days after he was disqualified on March 24.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm