ಬ್ರೇಕಿಂಗ್ ನ್ಯೂಸ್
06-11-20 12:17 pm Headline Karnataka News Network ದೇಶ - ವಿದೇಶ
ಭೋಪಾಲ್, ನವೆಂಬರ್ 06: ದೇಶಾದ್ಯಂತ ಚೀನಾ ವಿರೋಧಿ ಅಭಿಯಾನ ಮುಂದುವರಿದಿದ್ದು, ದೀಪಾವಳಿ ಹತ್ತಿರ ಬರುತ್ತಿದ್ದಂತೆ ಚೀನಾ ನಿರ್ಮಿತ ಪಟಾಕಿಗಳ ನಿಷೇಧಕ್ಕೆ ಒತ್ತಾಯ ಕೇಳಿಬಂದಿದೆ. ಮಧ್ಯಪ್ರದೇಶ ಸರಕಾರ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಚೀನಾ ಪಟಾಕಿ ನಿಷೇಧದ ಜೊತೆ ಯಾರೇ ಆದ್ರೂ ಬಳಕೆ ಮಾಡಿದ್ದು ಕಂಡುಬಂದರೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಚೀನ ನಿರ್ಮಿತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಫೋಟಕಗಳ ಕಾನೂನು ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ಮಾರಾಟ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧ. ಅದೇ ನೀತಿ ಚೀನಾ ನಿರ್ಮಿತ ಪಟಾಕಿಗಳಿಗೂ ಅನ್ವಯವಾಗುತ್ತದೆ ಎಂದು ಚೌಹಾಣ್ ತಿಳಿಸಿದ್ದಾರೆ.


ಗೃಹ ಇಲಾಖೆಯಿಂದ ಈ ಕುರಿತು ಮಧ್ಯಪ್ರದೇಶದ ಎಲ್ಲಾ ಜಿಲ್ಲಾಡಳಿತಗಳಿಗೂ ಸುತ್ತೋಲೆ ಕಳಿಸಲಾಗಿದೆ. ಅಲ್ಲದೆ, ಚೀನಾ ಸೇರಿದಂತೆ ಇತರ ಯಾವುದೇ ದೇಶಗಳಿಂದ ಪಟಾಕಿ ಆಮದು ಮಾಡಿ ಮಾರಾಟ ಮಾಡುವುದು ಶಿಕ್ಷಾರ್ಹವಾಗುತ್ತದೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಪ್ಯಾಕೆಟ್ ಮೇಲೆ ದೇವರ ಚಿತ್ರಗಳಿರುವುದನ್ನು ನಿಷೇಧಿಸಲಾಗಿದ್ದು ಇಂಥ ಅಕ್ರಮ ಕಂಡುಬಂದರೆ ರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದೆ.
Chief Minister Shivraj Singh Chouhan on Wednesday warned that sale and use of Chinese-made crackers would lead to prosecution under Explosives Act, and two years in jail.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm