ಬ್ರೇಕಿಂಗ್ ನ್ಯೂಸ್
06-11-20 01:13 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಕಾಲೇಜು ಮತ್ತು ಸ್ನಾತಕೋತ್ತರ ವಿಭಾಗಗಳನ್ನು ಆರಂಭಿಸಲು ಹಲವು ರಾಜ್ಯಗಳು ನಿರ್ಧರಿಸಿದ್ದು ಈ ನಡುವೆ ಕಾಲೇಜಿನಲ್ಲಿ ಯಾವ ರೀತಿ ವ್ಯವಸ್ಥೆ ಮಾಡಬೇಕೆಂಬ ನೆಲೆಯಲ್ಲಿ ಯುಜಿಸಿ ಮಾರ್ಗದರ್ಶಿ ಸೂತ್ರಗಳನ್ನು ಮುಂದಿಟ್ಟಿದೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್, ಯುಜಿಸಿ ಬಿಡುಗಡೆ ಮಾಡಿರುವ ಮಾರ್ಗದರ್ಶಿಗಳನ್ನು ಟ್ವೀಟ್ ಮಾಡಿದ್ದಾರೆ. ಆರು ದಿನಗಳಲ್ಲಿ ಕಾಲೇಜು ಮಾಡುವುದಿದ್ದರೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕ್ಲಾಸ್ ರೂಂ ವ್ಯವಸ್ಥೆ ಮಾಡಬೇಕು. ಶಿಫ್ಟ್ ಪ್ರಕಾರ ಅಥವಾ 50 ಶೇಕಡಾ ಹಾಜರಾತಿ ಮೂಲಕ ಕಾಲೇಜು ನಡೆಸುವಂತೆ ಯುಜಿಸಿ ಸೂಚನೆ ನೀಡಿದೆ.
ಆಯಾ ರಾಜ್ಯಗಳ ವ್ಯಾಪ್ತಿಯಲ್ಲಿ ಕಾಲೇಜು ಆರಂಭದ ದಿನಾಂಕದ ಬಗ್ಗೆ ಆಯಾ ಸರಕಾರಗಳೇ ನಿರ್ಧರಿಸಬೇಕು. ಜೊತೆಗೆ, ಶಿಕ್ಷಣ ಸಂಸ್ಥೆಗಳು ಕಾಲೇಜು ಆರಂಭಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ, ವಿದೇಶದಿಂದ ಆಗಮಿಸುವ ವಿದ್ಯಾರ್ಥಿಗಳಿಗೂ ಯಾವೆಲ್ಲ ಮುಂಜಾಗ್ರತೆಗಳನ್ನು ತೆಗೆದುಕೊಳ್ಳಬೇಕು ಅವನ್ನು ಪೂರೈಸಿಕೊಂಡು ಅಡ್ಮಿಶನ್ ಮಾಡಿಕೊಳ್ಳುವಂತೆ ಯುಜಿಸಿ ಹೇಳಿದೆ. ಕೇಂದ್ರ ಸರಕಾರ ಅಕ್ಟೋಬರ್ 15ರ ಬಳಿಕ ಶಾಲೆ ಮತ್ತು ಕಾಲೇಜು ಆರಂಭಿಸಲು ಅವಕಾಶ ನೀಡಿತ್ತು. ಆದರೆ, ಆಯಾ ರಾಜ್ಯಗಳಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸೂಚನೆ ನೀಡಲಾಗಿತ್ತು.
ಯುಜಿಸಿ ಮಾರ್ಗಸೂಚಿ ಪ್ರಕಾರ, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಜೊತೆಗೆ, ಆರು ಅಡಿ ಅಂತರದಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳಿಗೆ ಬಳಕೆಗೆ ಅನುವಾಗುವಂತೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಕೆಮ್ಮು, ನೆಗಡಿ ಇದ್ದವರು ಟವೆಲ್ ಬಳಸಬೇಕು. ಅಥವಾ ಟಿಶ್ಯು ಪೇಪರ್ ಬಳಸಿದರೆ ಅದನ್ನು ಸೂಕ್ತವಾಗಿ ಡಿಸ್ಪೋಸ್ ಮಾಡಲು ವ್ಯವಸ್ಥೆ ಮಾಡಬೇಕು. ಅಲ್ಲಲ್ಲಿ ಉಗಿಯುವುದನ್ನು ಕಡ್ಡಾಯವಾಗಿ ನಿಷೇಧಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
In line with the notion of @HMOIndia regarding the precautionary measures against #COVID19, @ugc_india has now framed guidelines for the reopening of universities and colleges. pic.twitter.com/D8BPcEA646
— Dr. Ramesh Pokhriyal Nishank (@DrRPNishank) November 5, 2020
Reopening of colleges and universities should start with libraries and laboratories, research scholars, science and technology postgraduates, and final year students, according to the University Grants Commission.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm