ಬ್ರೇಕಿಂಗ್ ನ್ಯೂಸ್
14-08-23 02:03 pm HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 14: ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಂತರ 19 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ, ಯುವಕನ ತಂದೆ ಕೂಡ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.
ತಮಿಳುನಾಡಿನ ಚೆನ್ನೈನಲ್ಲಿರುವ ತನ್ನ ಮನೆಯಲ್ಲಿ ತಂದೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ 2022 ರಲ್ಲಿ 12 ನೇ ತರಗತಿಯಲ್ಲಿ 427 ಅಂಕಗಳೊಂದಿಗೆ ಪಾಸಾಗಿದ್ದ ಜಗದೀಶ್ವರನ್ ಎಂಬ ವಿದ್ಯಾರ್ಥಿ ಸತತ ಎರಡು ಪ್ರಯತ್ನಗಳಲ್ಲಿ ನೀಟ್ ಪ್ರವೇಶ ಪರೀಕ್ಷೆಯನ್ನು ಪಾಸಾಗಲು ಸಾಧ್ಯವಾಗಲಿಲ್ಲ. ಇತ್ತೀಚಿನ ಫಲಿತಾಂಶದಿಂದ ತೀವ್ರ ನೊಂದಿದ್ದ ಜಗದೀಶ್ವರನ್ ಶನಿವಾರ ತಂದೆ ಕರೆ ಮಾಡಿದರೂ ಸ್ಪಂದಿಸಿರಲಿಲ್ಲ. ನಂತರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಗದೀಶ್ವರನ್ ಆತ್ಮಹತ್ಯೆಗೆ ತುತ್ತಾಗಿದ್ದರು. ಆದರೆ ಇದೇ ನೋವಲ್ಲಿದ್ದ ತಂದೆ ಸೆಲ್ವಶೇಖರ್ ಅವರೂ ಕೂಡ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಮಗ ಜಗದೀಶ್ವರನ್ ಸಾವನ್ನಪ್ಪಿದ ಮಾರನೇ ದಿನವೇ ತಂದೆ ಸೆಲ್ವಶೇಖರ್ ಶವವಾಗಿ ಪತ್ತೆಯಾಗಿದ್ದರು. ಮಗನ ಸಾವಿನ ದುಃಖ ತಾಳಲಾರದೆ ಸೆಲ್ವಶೇಖರ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ .ಸ್ಟಾಲಿನ್ ಅವರು ಸಾವಿಗೆ ಸಂತಾಪ ಸೂಚಿಸಿದ್ದು, "ಆತ್ಮಹತ್ಯೆಯ ಆಲೋಚನೆಗಳನ್ನು ಮಾಡಬೇಡಿ. ಆತ್ಮ ವಿಶ್ವಾಸವನ್ನು ಹೊಂದಲು ಹಾಗೂ ಬದುಕಲು ಕಲಿಯಿರಿ" ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.
ಇದೇ ವೇಳೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದು ಹಾಕುತ್ತೇವೆ. ಯಾರೂ ಕೂಡ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾನು ವಿದ್ಯಾರ್ಥಿಗಳೊಂದಿಗೆ ಮನವಿ ಮಾಡುತ್ತೇನೆ. ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದುಹಾಕುತ್ತೇವೆ. ತಮಿಳುನಾಡು ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತವಾಗಿದೆ ಎಂದು ಹೇಳಿದ್ದಾರೆ.
ನೀಟ್ ಅಭ್ಯರ್ಥಿ ಜಗದೀಶ್ವರನ್, ಆತ್ಮಹತ್ಯೆ ಮಾಡಿಕೊಂಡಿದ್ದು ಕೇಳಿ ನನಗೆ ಆಘಾತವಾಯಿತು. ಅವರ ಪೋಷಕರನ್ನು ಸಮಾಧಾನ ಮಾಡುವುದು ಹೇಗೆ ಎಂದು ಯೋಚಿಸುತ್ತಿರುವಾಗಲೇ, ಅವರ ತಂದೆ ಸೆಲ್ವಶೇಖರ್ ಕೂಡ ಆತ್ಮಹತ್ಯೆ ಮಾಡಿಕೊಂಡರು. ಜಗದೀಶ್ವರನ್ ಅವರ ಕುಟುಂಬ, ಸ್ನೇಹಿತ ವರ್ಗ ಹಾಗೂ ಬಂಧು ಬಳಗಕ್ಕೆ ಹೇಗೆ ಸಾಂತ್ವನ ಹೇಳುವುದು ಎಂದು ನನಗೆ ತಿಳಿಯತ್ತಿಲ್ಲ. ವೈದ್ಯನಾಗುವ ಆಸೆ ಕಂಡಿದ್ದ ಬುದ್ದಿವಂತ ವಿದ್ಯಾರ್ಥಿಯೊಬ್ಬ ನೀಟ್ನಿಂದ ಆತ್ಮಹತ್ಯೆ ಮಾಡಿಕೊಂಡವರ ಸಾಲಿಗೆ ಸೇರಿದ್ದು ದುರಂತ’ ಎಂದು ಅವರು ಹೇಳಿದ್ದಾರೆ.
A 19-year-old medical aspirant died by suicide in Chennai after he failed to clear the NEET exam twice. He was found hanging in his room. He was rushed to a hospital where he was declared brought dead.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm