ಬ್ರೇಕಿಂಗ್ ನ್ಯೂಸ್
14-08-23 02:03 pm HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 14: ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಂತರ 19 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ, ಯುವಕನ ತಂದೆ ಕೂಡ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.
ತಮಿಳುನಾಡಿನ ಚೆನ್ನೈನಲ್ಲಿರುವ ತನ್ನ ಮನೆಯಲ್ಲಿ ತಂದೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ 2022 ರಲ್ಲಿ 12 ನೇ ತರಗತಿಯಲ್ಲಿ 427 ಅಂಕಗಳೊಂದಿಗೆ ಪಾಸಾಗಿದ್ದ ಜಗದೀಶ್ವರನ್ ಎಂಬ ವಿದ್ಯಾರ್ಥಿ ಸತತ ಎರಡು ಪ್ರಯತ್ನಗಳಲ್ಲಿ ನೀಟ್ ಪ್ರವೇಶ ಪರೀಕ್ಷೆಯನ್ನು ಪಾಸಾಗಲು ಸಾಧ್ಯವಾಗಲಿಲ್ಲ. ಇತ್ತೀಚಿನ ಫಲಿತಾಂಶದಿಂದ ತೀವ್ರ ನೊಂದಿದ್ದ ಜಗದೀಶ್ವರನ್ ಶನಿವಾರ ತಂದೆ ಕರೆ ಮಾಡಿದರೂ ಸ್ಪಂದಿಸಿರಲಿಲ್ಲ. ನಂತರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಗದೀಶ್ವರನ್ ಆತ್ಮಹತ್ಯೆಗೆ ತುತ್ತಾಗಿದ್ದರು. ಆದರೆ ಇದೇ ನೋವಲ್ಲಿದ್ದ ತಂದೆ ಸೆಲ್ವಶೇಖರ್ ಅವರೂ ಕೂಡ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಮಗ ಜಗದೀಶ್ವರನ್ ಸಾವನ್ನಪ್ಪಿದ ಮಾರನೇ ದಿನವೇ ತಂದೆ ಸೆಲ್ವಶೇಖರ್ ಶವವಾಗಿ ಪತ್ತೆಯಾಗಿದ್ದರು. ಮಗನ ಸಾವಿನ ದುಃಖ ತಾಳಲಾರದೆ ಸೆಲ್ವಶೇಖರ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ .ಸ್ಟಾಲಿನ್ ಅವರು ಸಾವಿಗೆ ಸಂತಾಪ ಸೂಚಿಸಿದ್ದು, "ಆತ್ಮಹತ್ಯೆಯ ಆಲೋಚನೆಗಳನ್ನು ಮಾಡಬೇಡಿ. ಆತ್ಮ ವಿಶ್ವಾಸವನ್ನು ಹೊಂದಲು ಹಾಗೂ ಬದುಕಲು ಕಲಿಯಿರಿ" ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.
ಇದೇ ವೇಳೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದು ಹಾಕುತ್ತೇವೆ. ಯಾರೂ ಕೂಡ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾನು ವಿದ್ಯಾರ್ಥಿಗಳೊಂದಿಗೆ ಮನವಿ ಮಾಡುತ್ತೇನೆ. ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದುಹಾಕುತ್ತೇವೆ. ತಮಿಳುನಾಡು ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತವಾಗಿದೆ ಎಂದು ಹೇಳಿದ್ದಾರೆ.
ನೀಟ್ ಅಭ್ಯರ್ಥಿ ಜಗದೀಶ್ವರನ್, ಆತ್ಮಹತ್ಯೆ ಮಾಡಿಕೊಂಡಿದ್ದು ಕೇಳಿ ನನಗೆ ಆಘಾತವಾಯಿತು. ಅವರ ಪೋಷಕರನ್ನು ಸಮಾಧಾನ ಮಾಡುವುದು ಹೇಗೆ ಎಂದು ಯೋಚಿಸುತ್ತಿರುವಾಗಲೇ, ಅವರ ತಂದೆ ಸೆಲ್ವಶೇಖರ್ ಕೂಡ ಆತ್ಮಹತ್ಯೆ ಮಾಡಿಕೊಂಡರು. ಜಗದೀಶ್ವರನ್ ಅವರ ಕುಟುಂಬ, ಸ್ನೇಹಿತ ವರ್ಗ ಹಾಗೂ ಬಂಧು ಬಳಗಕ್ಕೆ ಹೇಗೆ ಸಾಂತ್ವನ ಹೇಳುವುದು ಎಂದು ನನಗೆ ತಿಳಿಯತ್ತಿಲ್ಲ. ವೈದ್ಯನಾಗುವ ಆಸೆ ಕಂಡಿದ್ದ ಬುದ್ದಿವಂತ ವಿದ್ಯಾರ್ಥಿಯೊಬ್ಬ ನೀಟ್ನಿಂದ ಆತ್ಮಹತ್ಯೆ ಮಾಡಿಕೊಂಡವರ ಸಾಲಿಗೆ ಸೇರಿದ್ದು ದುರಂತ’ ಎಂದು ಅವರು ಹೇಳಿದ್ದಾರೆ.
A 19-year-old medical aspirant died by suicide in Chennai after he failed to clear the NEET exam twice. He was found hanging in his room. He was rushed to a hospital where he was declared brought dead.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm