ಬ್ರೇಕಿಂಗ್ ನ್ಯೂಸ್
06-11-20 06:08 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುವುದು ಗೊತ್ತು. ಏಪ್ ಅಳವಡಿಸಿಕೊಂಡು ಜನರು ಬಳಕೆ ಕೂಡ ಮಾಡುತ್ತಿದ್ದಾರೆ. ಆದರೆ, ಭಾರತದಲ್ಲಿ ಅದಕ್ಕಿಂತಲೂ ಹೆಚ್ಚು ಜನ ಬಳಸುತ್ತಿರುವ ಏಪ್ ಅಂದರೆ ಅದು ವಾಟ್ಸ್ ಏಪ್. ಸಿಹಿಸುದ್ದಿ ಅಂದ್ರೆ ಇನ್ನು ವಾಟ್ಸಪ್ ನಲ್ಲಿಯೂ ಹಣ ವರ್ಗಾವಣೆಯ ಸೌಲಭ್ಯ ಸಿಗಲಿದೆ.
ಎರಡು ವರ್ಷಗಳ ಹಿಂದೆ ವಾಟ್ಸ್ ಏಪ್ ಅನ್ನು ಫೇಸ್ಬುಕ್ ಸಂಸ್ಥೆ ಖರೀದಿಸಿದ ಕೂಡಲೇ ಹಣ ಪಾವತಿ ವ್ಯವಸ್ಥೆಯನ್ನೂ ಮಾಡಲು ಮುಂದಾಗಿತ್ತು. ಆದರೆ, ರಾಷ್ಟ್ರೀಯ ಪಾವತಿ ನಿಗಮದಿಂದ ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಗ್ರಾಹಕರ ಖಾಸಗಿತನ ರಕ್ಷಿಸುವ ಸಲುವಾಗಿ ಸ್ಥಳೀಯ ದತ್ತಾಂಶ ಕೇಂದ್ರ ಸ್ಥಾಪಿಸುವಂತೆ ಫೇಸ್ ಬುಕ್ ಸಂಸ್ಥೆಗೆ ಸೂಚಿಸಲಾಗಿತ್ತು.


ಈಗ ಎನ್ ಸಿಪಿಐ ಅನುಮತಿ ದೊರೆತಿದ್ದು, ನ.6ರಿಂದಲೇ ಹೊಸ ಯೋಜನೆ ಜಾರಿಗೆ ತರುತ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಆಂಡ್ರಾಯ್ಡ್ ಮತ್ತು ಸ್ಮಾರ್ಟ್ ಫೋನ್ ಸೌಲಭ್ಯ ಇರುವ ಫೋನ್ ಗಳಲ್ಲಿ ವಾಟ್ಸಪ್ ಪೇ ಸೌಲಭ್ಯ ಪಡೆಯಬಹುದಾಗಿದೆ. ಗೂಗಲ್ ಪೇ, ಫೋನ್ ಪೇ ರೀತಿಯಲ್ಲೇ ಇದು ಕೂಡ ಕಾರ್ಯ ನಿರ್ವಹಿಸಲಿದೆ. ಬ್ಯಾಂಕ್ ಖಾತೆ ಲಿಂಕ್ ಮಾಡಿಕೊಂಡರೆ ವಾಟ್ಸಪ್ ಚಾಟ್ ಲಿಸ್ಟ್ ಮೂಲಕವೇ ಹಣ ವರ್ಗಾವಣೆ ಮಾಡಬಹುದು ಎಂದು ಫೇಸ್ಬುಕ್ ಹೇಳಿದೆ.
ವಾಟ್ಸಪ್ ಮೆಸೇಜಿಂಗ್ ಸೇವೆಯು ಭಾರತದಲ್ಲಿ ಜನಪ್ರಿಯವಾಗಿದ್ದು, ಅತಿ ಹೆಚ್ಚು ಜನ ಬಳಕೆ ಮಾಡುತ್ತಾರೆ. ಹೀಗಾಗಿ ಗರಿಷ್ಠ ಬಳಕೆದಾರರನ್ನು ಪಡೆಯಲು ಫೇಸ್ಬುಕ್ ಸಂಸ್ಥೆ ಗುರಿ ಇರಿಸಿಕೊಂಡಿದ್ದು ಈಗಾಗ್ಲೇ ಜನಪ್ರಿಯವಾಗಿರುವ ಗೂಗಲ್ ಪೇ ಮತ್ತು ಫೋನ್ ಪೇಗಳಿಗೆ ಪೈಪೋಟಿ ನೀಡಲಿದೆ.
WhatsApp on Friday said it is rolling out its payments services in India after receiving a nod from the National Payments Corporation of India (NPCI).
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm