ಬ್ರೇಕಿಂಗ್ ನ್ಯೂಸ್
16-08-23 01:57 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ಇಂಗ್ಲೆಂಡಿನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನಡೆದ 'ರಾಮ ಕಥಾ' ಕಾರ್ಯಕ್ರಮದಲ್ಲಿ ಭಾಗವಹಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್, 'ನಾನು ಇಲ್ಲಿಗೆ ಪ್ರಧಾನಿಯಾಗಿ ಬಂದಿಲ್ಲ. ಒಬ್ಬ ಹಿಂದೂವಾಗಿ ಬಂದಿದ್ದೇನೆ' ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
'ಜೈ ಸೀತಾ ರಾಮ್' ಎಂದು ಭಾಷಣ ಆರಂಭಿಸಿದ ಪ್ರಧಾನಿ ರಿಷಿ ಸುನಕ್, ಶ್ರೀರಾಮನೇ ನನಗೆ ಆದರ್ಶ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ ಎಂದಿದ್ದಾರೆ. ಭಾರತದ ಸ್ವಾತಂತ್ರ್ಯ ದಿನದಂದು ಮೊರಾರಿ ಬಾಪು ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಿಷಿ ಸುನಕ್ ಭಾಗವಹಿಸಿದ್ದರು. ಬಾಪು ಅವರೇ ನಾನು ಇಂದು ಪ್ರಧಾನಿಯಾಗಿ ಇಲ್ಲಿಗೆ ಬಂದಿಲ್ಲ. ಒಬ್ಬ ಹಿಂದೂ ಆಗಿ ಬಂದಿದ್ದೇನೆ ಎಂದಿದ್ದಾರೆ.
ನಂಬಿಕೆ ಎನ್ನುವುದು ವೈಯಕ್ತಿಕ ವಿಷಯವಾಗಿದೆ. ನನ್ನ ಜೀವನದ ಪ್ರತಿಯೊಂದು ಅಂಶದಲ್ಲೂ ನಾನಿಟ್ಟಿರುವ ನಂಬಿಕೆ ನನಗೆ ಮಾರ್ಗದರ್ಶನ ನೀಡಿದೆ. ಪ್ರಧಾನಿಯಾಗುವುದು ದೊಡ್ಡ ಗೌರವ, ಆದರೆ ಅದಕ್ಕೆ ಅನೇಕ ಕಷ್ಟಗಳನ್ನು ಎದುರಿಸಬೇಕು. ನಂಬಿಕೆ ನನಗೆ ಆ ಧೈರ್ಯ, ಶಕ್ತಿ ನೀಡಿದೆ ಎಂದು ಸುನಕ್ ಹೇಳಿದ್ದಾರೆ. ರಾಮಾಯಣ, ಭಗವದ್ಗೀತೆ ಮತ್ತು ಹನುಮಾನ್ ಚಾಲೀಸಾ ನೆನಪಿಸಿಕೊಂಡು ಇಲ್ಲಿಗೆ ಬಂದಿದ್ದೇನೆ. ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ದೇಶದ ಆಡಳಿತವನ್ನು ಸುಗಮವಾಗಿ ನಡೆಸಲು ನನಗೆ ಶ್ರೀರಾಮನು ಸ್ಫೂರ್ತಿ ನೀಡಿದ್ದಾನೆ ಎಂದರು. ರಿಷಿ ಸುನಕ್ 'ರಾಮ ಕಥಾ' ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Not here as PM but as a Hindu, UK PM @RishiSunak greets with ‘Jai Siya Ram’ as he attends Morari Bapu's Katha at Cambridge University pic.twitter.com/atO95iQjtf
— 🦏 Payal M/પાયલ મેહતા/ पायल मेहता/ পাযেল মেহতা (@payalmehta100) August 15, 2023
British Prime Minister Rishi Sunak, who met renowned Ramayan ‘kathakar’ Morari Bapu at Cambridge University on Tuesday on the Indian Independence Day, said he was there “not as prime minister but as a Hindu”.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm