ಬ್ರೇಕಿಂಗ್ ನ್ಯೂಸ್
16-08-23 07:01 pm HK News Desk ದೇಶ - ವಿದೇಶ
ಇಸ್ಲಾಮಬಾದ್, ಆಗಸ್ಟ್ 16: ಮುಸ್ಲಿಂ ಮೂಲಭೂತವಾದಿಗಳ ಗುಂಪೊಂದು ಧರ್ಮನಿಂದೆಯ ಆರೋಪದ ಮೇಲೆ ಚರ್ಚ್ಗೆ ಬೆಂಕಿ ಹಚ್ಚಿದ್ದು ಕ್ರಿಶ್ಚಿಯನ್ನರು ಭಯಭೀತರಾದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರ ಜೀವನವೂ ನರಕವಾಗಿದೆ. ಈ ಬಾರಿ ಮುಸ್ಲಿಂ ಮೂಲಭೂತವಾದಿಗಳ ಗುಂಪೊಂದು ಫೈಸಲಾಬಾದ್ ಜಿಲ್ಲೆಯಲ್ಲಿ ಚರ್ಚ್ಗೆ ಬೆಂಕಿ ಹಚ್ಚಿದೆ.
ಧರ್ಮನಿಂದೆಯ ಆರೋಪದ ಮೇಲೆ ಚರ್ಚ್ ಅನ್ನು ಸುಟ್ಟು ನಾಶಪಡಿಸಲಾಗಿದೆ. ಪಾಕಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಮತ್ತೊಂದು ದಾಳಿಯಲ್ಲಿ ಫೈಸಲಾಬಾದ್ ಜಿಲ್ಲೆಯ ಚರ್ಚ್ ಗೆ ಬೆಂಕಿ ಹಚ್ಚಲಾಗಿದೆ. ಧರ್ಮನಿಂದೆಯ ಆರೋಪದ ಮೇಲೆ ಗುಂಪೊಂದು ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆಯಲ್ಲಿ ಚರ್ಚ್ ಅನ್ನು ಧ್ವಂಸ ಮಾಡಿದೆ.



ಪಾಕಿಸ್ತಾನದಲ್ಲಿ ಚರ್ಚ್ಗೆ ಬೆಂಕಿ!
ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಬರೆದುಕೊಂಡಿರುವ ಬಿಷಪ್ ಮಾರ್ಷಲ್, "ನಾನು ಇದನ್ನು ಬರೆಯುವಾಗ ನಾನು ಪದಗಳೇ ಬರುತ್ತಿಲ್ಲ. ಪಾಕಿಸ್ತಾನದ ಫೈಸಲಾಬಾದ್ ಜಿಲ್ಲೆಯ ಜರನ್ವಾಲಾ ಘಟನೆಯ ಬಗ್ಗೆ ನಾವು, ಬಿಷಪ್ಗಳು, ಪಾದ್ರಿಗಳು ಮತ್ತು ಸಾಮಾನ್ಯ ಜನರು ತೀವ್ರ ದುಃಖಿತರಾಗಿದ್ದೇವೆ''
''ಇಲ್ಲಿ ಚರ್ಚ್ಗೆ ಬೆಂಕಿ ಹಚ್ಚಲಾಗಿದೆ ಮತ್ತು ಬೈಬಲ್ ಅನ್ನು ಅವಮಾನಿಸಲಾಗಿದೆ. ಮಾತ್ರವಲ್ಲದೆ ಕ್ರಿಶ್ಚಿಯನ್ನರನ್ನು ಪವಿತ್ರ ಕುರಾನ್ ಉಲ್ಲಂಘಿಸಿದ್ದಾರೆಂದು ಸುಳ್ಳು ಆರೋಪ ಹೊರಿಸಲಾಗಿದೆ" ಎಂದು ಅವರು ಕಿರುಕುಳದ ಆರೋಪ ಮಾಡಿದ್ದಾರೆ.





ತನ್ನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ನ್ಯಾಯ ಮತ್ತು ಕ್ರಮಕ್ಕಾಗಿ ನಾನು ಕರೆ ನೀಡುತ್ತಿದ್ದೇನೆ ಎಂದು ಬಿಷಪ್ ಮಾರ್ಷಲ್ ಹೇಳಿದ್ದಾರೆ. ಜೊತೆಗೆ ಅವರು ನಾಗರಿಕರ ಸುರಕ್ಷತೆಗೆ ಒತ್ತಾಯಿಸಿದ್ದಾರೆ. ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಾರೆ. ಇಲ್ಲಿ ಅಲ್ಪಸಂಖ್ಯಾತರಿಗೆ ಸ್ವಾತಂತ್ರ್ಯವಿಲ್ಲ ಎಂದು ಹೇಳಿದ್ದಾರೆ.
ಸಹಿಷ್ಣು ಮತ್ತು ಸಮಾನತೆಯ ದೇಶವನ್ನು ರಚಿಸುವ ಉದ್ದೇಶದಿಂದ 1947 ರಲ್ಲಿ ಪಾಕಿಸ್ತಾನವನ್ನು ಸ್ಥಾಪಿಸಲಾಯಿತು. ಆದರೆ ಅದು ಕೇವಲ ಹೇಳುವುದಕ್ಕಾಗಿ ಮಾತ್ರ. ಪಾಕಿಸ್ತಾನವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲಾಗಿದೆ ಮತ್ತು ಕಳೆದ 76 ವರ್ಷಗಳಲ್ಲಿ ಅಲ್ಪಸಂಖ್ಯಾತರು ಬಹುತೇಕ ನಾಶವಾಗಿದ್ದಾರೆ.
A church was vandalized and set on fire in the Faisalabad district of Pakistan, in yet another assault on religious minorities, according to Lahore-based Bishop Azad Marshall. A church in the Faisalabad area of Punjab province was vandalized and damaged as a result of the blasphemy accusations.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm