ಬ್ರೇಕಿಂಗ್ ನ್ಯೂಸ್
19-08-23 09:52 pm HK News Desk ದೇಶ - ವಿದೇಶ
ರಾಯ್ಪುರ, ಆಗಸ್ಟ್ 19: ಛತ್ತೀಸ್ಗಢದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿದ್ದಾರೆ. ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಅಧಿಕಾರ ಪಡೆಯುವುದಕ್ಕಾಗಿ ಉಚಿತ ವಿದ್ಯುತ್, ಮಹಿಳೆಯರಿಗೆ ಮಾಸಿಕ 'ಸಮ್ಮಾನ್ ರಾಶಿ' ಮತ್ತು ನಿರುದ್ಯೋಗಿಗಳಿಗೆ ಮಾಸಿಕ 3,000 ರೂಪಾಯಿ ಸೇರಿದಂತೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.
ಶನಿವಾರ ರಾಯ್ಪುರದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ದೆಹಲಿ ಮತ್ತು ಪಂಜಾಬ್ನಲ್ಲಿ ತಮ್ಮ ಪಕ್ಷದ ಸರ್ಕಾರಗಳು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿವೆ. ಛತ್ತೀಸ್ಗಢದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನೀಡಿದ ಭರವಸೆಗಳನ್ನು ಈಡೇರಿಸಲಾಗುವುದು ಎಂದರು. ನಾನು ನಿಮಗೆ 10 ಭರವಸೆಗಳನ್ನು ನೀಡುತ್ತಿದ್ದೇನೆ. ಇದು ನಕಲಿ ಪ್ರಣಾಳಿಕೆ ಅಥವಾ 'ಸಂಕಲ್ಪ ಪತ್ರ'ದಂತಲ್ಲ. ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಕೇಜ್ರಿವಾಲ್ ಹೇಳಿದರು.
ಅಧಿಕಾರಕ್ಕೆ ಬಂದರೆ, 24 ಗಂಟೆಗಳ ನಿರಂತರ ವಿದ್ಯುತ್ ಜೊತೆಗೆ ಪ್ರತಿ ಮನೆಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಿದ್ದೇವೆ. ನವೆಂಬರ್ 2023ರ ವರೆಗೆ ಬಾಕಿ ಉಳಿದಿರುವ ವಿದ್ಯುತ್ ಬಿಲ್ ಮನ್ನಾ, 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಮಾಸಿಕ 1,000 'ಸಮ್ಮಾನ್ ರಾಶಿ'(ಗೌರವಧನ) ಮತ್ತು ಶಾಲಾ ಮಕ್ಕಳಿಗೆ ಉಚಿತ ಗುಣಮಟ್ಟದ ಶಿಕ್ಷಣ ನೀಡುತ್ತೇವೆ ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ದೆಹಲಿಯಲ್ಲಿರುವಂತೆ, AAP ಸರ್ಕಾರವು ಛತ್ತೀಸ್ಗಢದ ಪ್ರತಿಯೊಬ್ಬ ನಾಗರಿಕರಿಗೆ ಉಚಿತ ಮತ್ತು ಉತ್ತಮ ಚಿಕಿತ್ಸೆಯನ್ನು ಒದಗಿಸಲಿದೆ, ಪ್ರತಿ ಹಳ್ಳಿ ಮತ್ತು ನಗರಗಳಲ್ಲಿನ ವಾರ್ಡ್ಗಳಲ್ಲಿ ಮೊಹಲ್ಲಾ ಕ್ಲಿನಿಕ್ ಸೇರಿ ಉದ್ಯೋಗ ನೀಡುತ್ತೇವೆ ಮತ್ತು ನಿರುದ್ಯೋಗಿಗಳಿಗೆ ತಿಂಗಳಿಗೆ 3,000 ರೂ. ಭತ್ಯೆ, ಹಿರಿಯ ನಾಗರಿಕರಿಗೆ ಉಚಿತ ತೀರ್ಥಯಾತ್ರೆ, ಛತ್ತೀಸ್ಗಢವನ್ನು ಭ್ರಷ್ಟಾಚಾರ ಮುಕ್ತಗೊಳಿಸಿ, ಗುತ್ತಿಗೆ ನೌಕರರನ್ನು ಕಾಯಂಗೊಳಿಸುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.
Arvind Kejriwal on Saturday announced 300 units of free electricity with 24x7 power supply to cities and villages across Chhattisgarh if his party wins in the upcoming state Assembly elections set for this year."We will provide up to 300 units of free electricity every month in Chhattisgarh," AAP national convenor announced in a public event in Raipur.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm