ಬ್ರೇಕಿಂಗ್ ನ್ಯೂಸ್
21-08-23 01:27 pm HK News Desk ದೇಶ - ವಿದೇಶ
ಕಾನ್ಪುರ, ಆಗಸ್ಟ್ 21: ಗುಜರಾತಿನಲ್ಲಿ ಹಾವು ಕಡಿತಕ್ಕೊಳಗಾದ ಯುವಕನೊಬ್ಬ ಚಿಕಿತ್ಸೆಗಾಗಿ ಸುಮಾರು 1,300 ಕಿ.ಮೀ ಕ್ರಮಿಸಿ ಉತ್ತರ ಪ್ರದೇಶದ ಕಾನ್ಪುರ ತಲುಪಿ ಬದುಕುಳಿದಿರುವ ಅಚ್ಚರಿಯ ಘಟನೆ ನಡೆದಿದೆ. ಕಿಶನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮ ಫತೇಪುರದ ಸುನಿಲ್ ಕುಮಾರ್ (20) ನೇ ಹೀಗೆ ಬದುಕುಳಿದ ಯುವಕನಾಗಿದ್ದಾನೆ
ಈತ ಗುಜರಾತ್ನ ರಾಜ್ಕೋಟ್ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಗಸ್ಟ್ 15ರಂದು ಆತನಿಗೆ ಹಾವು ಕಚ್ಚಿದೆ. ತಕ್ಷಣವೇ ಅವನನ್ನು ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಆದರೆ, ಸುನಿಲ್ ಆರೋಗ್ಯ ಹಾವು ಕಡಿತದಿಂದ ಹದಗೆಡುತ್ತಾ ಹೊರಟಿತ್ತು. ಅಲ್ಲದೆ ಆತ ಪ್ರಜ್ಞಾಹೀನಾಗಿದ್ದ. ಕುಟುಂಬದವರಿಗೆಲ್ಲ ಒಂದು ಬಾರಿ ಹೃದಯ ಬಡಿತ ನಿಂತಂತಾಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ತಡಮಾಡದೇ ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು.
ಆದರೆ, ಗುಜಾರತ್ನಿಂದ ಉತ್ತರಪ್ರದೇಶದ ಕಾನ್ಪುರ ಆಸ್ಪತ್ರೆಗೆ ಸುಮಾರು 1.300 ಕಿ.ಮೀ ದೂರವಿದೆ. ಈ ತುರ್ತು ಪರಿಸ್ಥಿತಿಯಲ್ಲಿ ಅಷ್ಟು ದೂರ ಕ್ರಮಿಸಿ ಸುನಿಲ್ನನ್ನು ಉಳಿಸಿಕೊಳ್ಳುವುದು ಕುಟುಂಬದವರಿಗೆ ಸವಾಲಾಗಿತ್ತು. ತಕ್ಷಣವೇ ಗುಜರಾತ್ನಲ್ಲಿ 51,000 ರೂಪಾಯಿಗಳಿಗೆ ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಆಂಬ್ಯುಲೆನ್ಸ್ನ್ನು ಬಾಡಿಗೆಗೆ ಪಡೆದು ಸುನಿಲ್ನ್ನು 1300 ಕಿಮೀ ಪ್ರಯಾಣಿಸಿ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ದಾಖಲಿಸಿದರು.
ಆಸ್ಪತ್ರೆಗೆ ತಲುಪಿದ ಕೂಡಲೇ ಸುನಿಲ್ನನ್ನು ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ಆರಂಭಿಸಲಾಯಿತು. ತುರ್ತು ಚಿಕಿತ್ಸೆ ನೀಡಿ ಪ್ರತಿ ನಿಮಿಷ ಸುನಿಲ್ ಆರೋಗ್ಯದ ಮೇಲೆ ನಿಗಾ ಇಡಲಾಯಿತು. ಅದೃಷ್ಟವಶಾತ್ ಸುನಿಲ್ ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಾ ಚೇತರಿಸಿಕೊಳ್ಳಲು ಪ್ರಾರಂಭಿಸಿದರು. ಅಂತಿಮವಾಗಿ ಶನಿವಾರ ಆತನಿಗೆ ಅಳವಡಿಸಿದ್ದ ವೆಂಟಿಲೇಟರ್ನ್ನು ತೆಗೆಯಲಾಗಿದೆ.
ವರದಿಗಳ ಪ್ರಕಾರ ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಗಳು ಶೇಕಡಾ 75 ರಷ್ಟು ಜನ ತಮಗೆ ಹಾವು ಕಚ್ಚಿದೆ ಎಂಭ ಭಯದಿಂದಲೇ ಸಾವನ್ನಪ್ಪುತ್ತಾರೆ. ಹಾವು ಕಚ್ಚಿದ್ದಾಗ ಭಯಗೊಂಡರೇ ನಿಮ್ಮ ಹೃದಯ ಬಡಿತ ಹೆಚ್ಚಾಗುತ್ತದೆ. ಇದರಿಂದ ದೇಹ ಸೇರಿರುವ ಹಾವಿನ ವಿಷ ಬೇಗ ನಿಮ್ಮ ರಕ್ತನಾಳಗಳ ಮೂಲಕ ದೇಹದ ತುಂಬೆಲ್ಲ ಪಸರಿಸುತ್ತದೆ. ಪರಿಣಾಮ ಬೇಗ ಉಸಿರು ಚೆಲ್ಲುವ ಸಾಧ್ಯತೆ ಹೆಚ್ಚು ಅಂತಾ ತಜ್ಞರು.
A youth, bitten by a snake in Gujarat on August 15, travelled around 1,300 km and reached Kanpur in Uttar Pradesh for his treatment. Sunil Kumar, 20, of Fatehpur works as a labourer in Rajkot, Gujarat, where a snake bit him. He was rushed to a health centre there but his condition worsened and later, he became unconscious.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm