ಬ್ರೇಕಿಂಗ್ ನ್ಯೂಸ್
23-08-23 10:20 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟಡ್ 23: ಫಿಡೆ ರೇಟೆಡ್ ವಿಶ್ವ ಚೆಸ್ ಟೂರ್ನಮೆಂಟಿನ ಫೈನಲ್ ಸ್ಪರ್ಧೆಯ ಎರಡನೇ ಪಂದ್ಯದಲ್ಲೂ ಭಾರತದ ಅತಿ ಕಿರಿಯ ಆಟಗಾರ ಆರ್. ಪ್ರಜ್ಞಾನಂದ ಡ್ರಾ ಸಾಧನೆ ಮಾಡಿದ್ದಾರೆ.
ಜಗತ್ತಿನ ನಂಬರ್ ವನ್ ಆಟಗಾರ ನಾರ್ವೆ ಮೂಲದ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಬುಧವಾರ ಎರಡನೇ ಫೈನಲ್ ಪಂದ್ಯವನ್ನು ಪ್ರಜ್ಞಾನಂದ ಆಡಿದ್ದು, ಇದರಲ್ಲಿಯೂ ಡ್ರಾ ಮಾಡಿಕೊಂಡಿದ್ದಾರೆ. ಮಂಗಳವಾರ ಮೊದಲ ಪಂದ್ಯವೂ 35 ನಡೆಗಳೊಂದಿಗೆ ಡ್ರಾ ಆಗಿತ್ತು. ಎರಡನೇ ಪಂದ್ಯದಲ್ಲಿ ಕೇವಲ 30 ನಡೆಗಳಲ್ಲಿ ಪಂದ್ಯವನ್ನು ಡ್ರಾ ಮಾಡಿದ್ದು, ವಿಶ್ವ ಚೆಸ್ ಆಟಗಾರರ ಹುಬ್ಬೇರುವಂತೆ ಮಾಡಿದೆ. ಭಾರತದ ಚೆಸ್ ಮಾಂತ್ರಿಕ ವಿಶ್ವನಾಥನ್ ಆನಂದ್ ಕೂಡ 18 ವರ್ಷದ ಪ್ರಜ್ಞಾನಂದ ಆಟವನ್ನು ಶ್ಲಾಘಿಸಿದ್ದಾರೆ.
ಅಜರ್ ಬೈಜಾನಿನ ಬಾಕು ನಗರದಲ್ಲಿ ವಿಶ್ವ ಚೆಸ್ ಟೂರ್ನಿ ನಡೆಯುತ್ತಿದ್ದು, ಭಾರತದ ಪ್ರಜ್ಞಾನಂದ ಚೆಸ್ ಜಗತ್ತಿನಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ. ಮೊದಲ ಫೈನಲ್ ಪಂದ್ಯವು ನಾಲ್ಕು ಗಂಟೆಗಳ ಸುದೀರ್ಘ ಕಾಲ ನಡೆದಿದ್ದರೆ, ಎರಡನೇ ಪಂದ್ಯವು ಕೇವಲ ಒಂದು ಗಂಟೆಯಲ್ಲಿ ಮುಗಿದಿತ್ತು. ಚೆಸ್ ವಿಶ್ವಕಪ್ ವಿಜೇತ ಯಾರು ಅನ್ನುವುದನ್ನು ನಿರ್ಧರಿಸಲು ಗುರುವಾರ ಬಿರುಸಿನ ನಡೆಯ ಟೈ ಬ್ರೇಕರ್ ಪಂದ್ಯ ನಡೆಯಲಿದೆ.
ಅಂದಹಾಗೆ, ವಿಶ್ವ ಚೆಸ್ ಟೂರ್ನಿಯ ಫೈನಲ್ ಸುತ್ತು ಪ್ರವೇಶಿಸಿದ ಭಾರತದ ಎರಡನೇ ಆಟಗಾರನೆಂಬ ಶ್ರೇಯವೂ ಪ್ರಜ್ಞಾನಂದ ಅವರಿಗೆ ಸಂದಿದೆ. ಈ ಮೊದಲು ವಿಶ್ವನಾಥನ್ ಆನಂದ್ ಮಾತ್ರ ಫೈನಲ್ ಸುತ್ತು ಪ್ರವೇಶ ಮಾಡಿದ್ದು ಮತ್ತು ವಿಶ್ವ ಚೆಸ್ ಮಾಸ್ಟರ್ ಆಗಿರುವ ಸಾಧನೆ ಮಾಡಿದ್ದರು. ಸದ್ಯ ಪ್ರಜ್ಞಾನಂದ ವಿಶ್ವ ಚೆಸ್ ರ್ಯಾಂಕಿಂಗ್ ನಲ್ಲಿ 23ನೇ ಶ್ರೇಯಾಂಕದ ಆಟಗಾರನಾಗಿದ್ದರೆ, ಮ್ಯಾಗ್ನಸ್ ಕಾರ್ಲ್ಸನ್ ನಂಬರ್ ವನ್ ಆಟಗಾರ. ಗುರುವಾರದ ಮೂರನೇ ಪಂದ್ಯದಲ್ಲಿ ನಂಬರ್ ವನ್ ಆಟಗಾರನನ್ನು ಪ್ರಜ್ಞಾನಂದ ಸೋಲಿಸಿದರೆ, ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ.
In a remarkable turn of events, Indian Grandmaster Rameshbabu Praggnanandhaa on Monday advanced to the final of the FIDE Chess World Cup 2023. His astounding victory over world number 3 Fabiano Caruana in Baku, Azerbaijan, has garnered widespread astonishment. This young talent's steady ascent in the realm of chess has been nothing short of impressive, and he is now poised to face off against world number 1, Magnus Carlsen, in the championship clash.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm