ಬ್ರೇಕಿಂಗ್ ನ್ಯೂಸ್
02-09-23 06:48 pm HK News Desk ದೇಶ - ವಿದೇಶ
ನವದೆಹಲಿ, ಸೆ.1: ಜೆಟ್ ಏರ್ವೇಸ್ ಸ್ಥಾಪಕ ನರೇಶ್ ಗೋಯಲ್ ಅವರನ್ನು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಪ್ಟೆಂಬರ್ 1ರಂದು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಬ್ಯಾಂಕ್ನಿಂದ ಸಾಲ ಪಡೆದು, ಸಾಲದ ಹಣವನ್ನು ತನ್ನದೇ ಆದ ಇತರೆ ಕಂಪನಿಗಳಿಗೆ ವರ್ಗಾವಣೆ ಮಾಡಿರುವ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ.
ಕೆಲವು ಗಂಟೆಗಳ ಕಾಲ ಇ.ಡಿ ಕಚೇರಿಯಲ್ಲಿ ಗೋಯಲ್ ಅವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಮನಿ ಲಾಂಡರಿಂಗ್ ತಡೆ ಕಾಯಿದೆ (ಪಿಎಂಎಲ್ಎ) ಅಡಿಯಲ್ಲಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
74 ವರ್ಷದ ನರೇಶ್ ಗೋಯಲ್ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯವು ಮುಂಬೈನ ವಿಶೇಷ ಪಿಎಂಎಲ್ಎ ಕೋರ್ಟ್ಗೆ ಅವರನ್ನು ಹಾಜರು ಪಡಿಸಿ ಕಸ್ಟಡಿಗೆ ಕೇಳಿತ್ತು. ಜಾರಿ ನಿರ್ದೇಶನಾಲಯದ ಬೇಡಿಕೆಯನ್ನು ಮನ್ನಿಸಿದ ನ್ಯಾಯಾಲಯವು ಅವರನ್ನು ಇ.ಡಿ ಕಸ್ಟಡಿಗೆ ನೀಡಿದೆ.
ಇ.ಡಿ ತನಿಖೆಯ ಪ್ರಕಾರ, ಜೆಟ್ ಏರ್ವೇಸ್ ಕೆನರಾ ಬ್ಯಾಂಕ್ನಿಂದ 539 ಕೋಟಿ ರೂ. ಸಾಲ ಪಡೆದು, ಹಣವನ್ನು ಹಿಂದಿರುಗಿಸಿಲ್ಲ. ಈ ಮೂಲಕ ಬ್ಯಾಂಕ್ಗೆ ನಷ್ಟ ಉಂಟು ಮಾಡಿದೆ.
ಈ ಸಂಬಂಧ ಕಳೆದ ನವೆಂಬರ್ನಲ್ಲಿ ಕೆನರಾ ಬ್ಯಾಂಕ್ ನರೇಶ್ ಗೋಯಲ್ ಮತ್ತು ಅವರ ಪತ್ನಿ ಅನಿತಾ ವಿರುದ್ಧ ವಂಚನೆ, ಕ್ರಿಮಿನಲ್ ಸಂಚು, ನಂಬಿಕೆ ದ್ರೋಹ ಮತ್ತು ಕ್ರಿಮಿನಲ್ ದುರ್ನಡತೆ ಆರೋಪ ಹೊರಿಸಿ ಕೇಸ್ ದಾಖಲಿಸಿತ್ತು. ಈ ಸಂಬಂಧ ಮೇ ತಿಂಗಳಿನಲ್ಲಿ ಸಿಬಿಐ ವಂಚನೆ ಕೇಸ್ ದಾಖಲಿಸಿತ್ತು. ನಂತರ ಇ.ಡಿ ಮನಿ ಲಾಂಡರಿಂಗ್ ಕೇಸ್ ದಾಖಲಿಸಿಕೊಂಡಿತ್ತು.
ಜೆಟ್ ಏರ್ವೇಸ್ ವಿರುದ್ಧ ಬ್ಯಾಂಕ್ ದಾಖಲಿಸಿರುವ ಎಫ್ಐಆರ್ನಲ್ಲಿ, ಕಂಪನಿಗೆ ಕ್ರೆಡಿಟ್ ಲಿಮಿಟ್ ಅಡಿಯಲ್ಲಿ 848.86 ಕೋಟಿ ರೂ. ಹಣವನ್ನು ಸಾಲವಾಗಿ ನೀಡಲಾಗಿತ್ತು. ಇದರಲ್ಲಿ 538.62 ಕೋಟಿ ರೂ. ಹಣವನ್ನು ಹಿಂದಿರುಗಿಸದೆ ಮೋಸ ಎಸಗಲಾಗಿದೆ ಎಂದು ಹೇಳಲಾಗಿದೆ. ಜುಲೈ 29, 2021ರಂದು ಸಿಬಿಐ ಇದನ್ನು ವಂಚನೆ ಎಂದು ಪರಿಗಣಿಸಿತ್ತು.
ಜೆಟ್ ಏರ್ವೇಸ್ ಲಿಮಿಟೆಡ್ (ಜೆಐಎಲ್)ನ ಫೊರೆನ್ಸಿಕ್ ಆಡಿಟ್ ಪ್ರಕಾರ ಕಂಪನಿಯು ತನ್ನ ಇತರೆ ಕಂಪನಿಗಳಿಗೆ ಅಕ್ರಮವಾಗಿ 1410.41 ಕೋಟಿ ರೂ. ಕಮಿಷನ್ ವೆಚ್ಚ ಹಾಗೂ ಇತರ ಖರ್ಚುಗಳ ರೂಪದಲ್ಲಿ ಪಾವತಿ ಮಾಡಿದೆ.
ಫೊರೆನ್ಸಿಕ್ ಆಡಿಟ್ ಪ್ರಕಾರ ಜೆಟ್ ಏರ್ವೇಸ್ ತನ್ನ ಸಹ ಕಂಪನಿ ಜೆಟ್ ಲೈಟ್ (ಇಂಡಿಯಾ) ಲಿಮಿಟೆಡ್ (ಜೆಎಲ್ಎಲ್)ಗೆ ಮುಂಗಡ ಮೊತ್ತವಾಗಿ ಹಣವನ್ನು ವರ್ಗಾವಣೆ ಮಾಡಿದೆ. ಜೆಐಎಲ್ ತನ್ನ ಅಂಗಸಂಸ್ಥೆಯಾದ ಜೆಎಲ್ಎಲ್ಗೆ ಸಾಲ, ಮುಂಗಡ ಮತ್ತು ಹೂಡಿಕೆಗಳ ರೂಪದಲ್ಲಿ ಅಕ್ರಮವಾಗಿ 1410.41 ಕೋಟಿ ರೂ.ಗಳನ್ನು ರವಾನಿಸಿದೆ ಎಂದು ಹೇಳಲಾಗಿದೆ.
The Enforcement Directorate on September 1 arrested Jet Airways (India) Limited’s founder chairman Naresh Jagdishrai Goyal, in connection with an alleged loan fraud involving about ₹538.62 crore of the Canara Bank.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm